ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನ ಭಂಡಿರಥವನ್ನು ದಾನಿಯೊಬ್ಬರು ಕೊಡುಗೆಯಾಗಿ ನೀಡಲಿದ್ದು, ಬ್ರಹ್ಮರಥ ನಿರ್ಮಿಸಿದ ಕೋಟೇಶ್ವರದವರಿಗೆ ರಥ ನಿರ್ಮಿಸಲು ಫೆ.12 ರಂದು ವೀಳ್ಯ ನೀಡಿಕೆಯಾಗಿದೆ.
ಮೋಹನದಾಸ್ ರೈ ಅವರ ಅಪ್ತರಾಗಿದ್ದ ಹೈದರಬಾದ್ ಮೂಲದ ಸಾಯಿ ಶ್ರೀನಿವಾಸ್ ಇತ್ತಿಚೆಗೆ ದೇವಾಲಯಕ್ಕೆ ಆಗಮಿಸಿದ್ದ ಸಂದರ್ಭ ಈ ಕೊಡುಗೆ ಘೋಷಣೆ ಮಾಡಿದ್ದರು. ಕೋಟೇಶ್ವರದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಅವರಿಗೆ ಶ್ರೀನಿವಾಸ್ ನಿರ್ದೇಶನದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀವತ್ಸ ಬೆಂಗಳೂರು ಹಾಗೂ ಸುಬ್ರಹ್ಮಣ್ಯದ ಮೋಹನದಾಸ ರೈ 12,50,001.00 ಹಣ ಪಾವತಿಸಿ ರಥ ನಿರ್ಮಿಸಲು ವೀಳ್ಯ ನೀಡಲಾಗಿದೆ. ಮೇ.2 ನೇ ವಾರದಲ್ಲಿ ರಥದ ಕೆಲಸ ಪೂರ್ಣವಾಗಲಿದ್ದು ಇದು 16 ಅಡಿ ಎತ್ತರ ಇರಲಿದೆ ಎಂದು ತಿಳಿದು ಬಂದಿದೆ. ಶ್ರೀನಿವಾಸ್ ಅವರು ಅನ್ನದಾನಕ್ಕೂ 2 ಲಕ್ಷ ಹಣ ಕೊಡುಗೆಯನ್ನು ನೀಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…