ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನ ಭಂಡಿರಥವನ್ನು ದಾನಿಯೊಬ್ಬರು ಕೊಡುಗೆಯಾಗಿ ನೀಡಲಿದ್ದು, ಬ್ರಹ್ಮರಥ ನಿರ್ಮಿಸಿದ ಕೋಟೇಶ್ವರದವರಿಗೆ ರಥ ನಿರ್ಮಿಸಲು ಫೆ.12 ರಂದು ವೀಳ್ಯ ನೀಡಿಕೆಯಾಗಿದೆ.
ಮೋಹನದಾಸ್ ರೈ ಅವರ ಅಪ್ತರಾಗಿದ್ದ ಹೈದರಬಾದ್ ಮೂಲದ ಸಾಯಿ ಶ್ರೀನಿವಾಸ್ ಇತ್ತಿಚೆಗೆ ದೇವಾಲಯಕ್ಕೆ ಆಗಮಿಸಿದ್ದ ಸಂದರ್ಭ ಈ ಕೊಡುಗೆ ಘೋಷಣೆ ಮಾಡಿದ್ದರು. ಕೋಟೇಶ್ವರದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಅವರಿಗೆ ಶ್ರೀನಿವಾಸ್ ನಿರ್ದೇಶನದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀವತ್ಸ ಬೆಂಗಳೂರು ಹಾಗೂ ಸುಬ್ರಹ್ಮಣ್ಯದ ಮೋಹನದಾಸ ರೈ 12,50,001.00 ಹಣ ಪಾವತಿಸಿ ರಥ ನಿರ್ಮಿಸಲು ವೀಳ್ಯ ನೀಡಲಾಗಿದೆ. ಮೇ.2 ನೇ ವಾರದಲ್ಲಿ ರಥದ ಕೆಲಸ ಪೂರ್ಣವಾಗಲಿದ್ದು ಇದು 16 ಅಡಿ ಎತ್ತರ ಇರಲಿದೆ ಎಂದು ತಿಳಿದು ಬಂದಿದೆ. ಶ್ರೀನಿವಾಸ್ ಅವರು ಅನ್ನದಾನಕ್ಕೂ 2 ಲಕ್ಷ ಹಣ ಕೊಡುಗೆಯನ್ನು ನೀಡಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…