ಕರಾವಳಿ

ಮೂಡುಬಿದಿರೆ: ಬೈಲ ಕುರಲ್ ಖ್ಯಾತಿಯ “ಭಾಷಾ” ಇನ್ನಿಲ್ಲ

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ “ಭಾಷಾ” ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ.


ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿ ಅವರ ಪುತ್ರ ವಸಂತ ಶೆಟ್ಟಿ(೫೨) ಕಳೆದ ಮೂರು ವರುಷಗಳಿಂದ ಅನಾರೋಗ್ಯವನ್ನು ಹೊಂದಿದ್ದರು. ಸುರೇಂದ್ರ ಕುಮಾರ್ ಕಲತ್ರಪಾದೆ ಅವರ ರಚನೆಯ ಅತ್ಯುತ್ತಮ ನಾಟಕ ಬೈರ ಕುರಲ್ ನಲ್ಲಿ “ಭಾಷಾ” ಎಂಬ ಹೆಸರಿನೊಂದಿಗೆ ಖಳನಾಯಕನಾಗಿ ಹೆಸರು ಮಾಡಿದ ವಸಂತ್ ಶೆಟ್ಟಿ ಅವರು ನಂತರ ತುಳು ರಂಗಭೂಮಿಯ ಪ್ರತಿಭಾನ್ವಿತ ಕಲಾವಿದನಾಗಿ ಬೆಳೆದು ಬಂದಿದ್ದರು.

ತೋಡಾರು ಬಂಗಬೆಟ್ಟು ಶಾಲೆಯಲ್ಲಿ 5ನೇ ತರಗತಿಯಲ್ಲಿರುವಾಗಲೇ ನಾಟಕದಲ್ಲಿ ಅಭಿನಯಿಸಿ ನಾಟಕ ರಂಗದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಓದು ಮುಗಿಸಿದ ಬಳಕ ಅವರು ತುಳು ನಾಟಕಗಳಲ್ಲಿ ತೊಡಗಿಸಿಕೊಂಡರು. ‘ಯಶಸ್ವಿ ಕಲಾವಿದೆರ್’ ಮಂಗಳೂರು ತಂಡದ ಸದಸ್ಯರಾಗಿ ಕೆಲವು ನಾಟಕಗಳಲ್ಲಿ ಅಭಿನಯಿಸಿದ್ದರು.
ನಂತರ ‘ನಮ್ಮ ಕಲಾವಿದೆರ್ ಬೆದ್ರ’ ತಂಡಕ್ಕೆ ಸೇರ್ಪಡೆಯಾಗಿ ಜಿಲ್ಲೆಯಾದ್ಯಂತ ಅನೇಕ ತುಳು ನಾಟಕಗಳಲ್ಲಿ ಅಭಿನಯಿಸಿ ಯಶಸ್ವಿ ನಟರಾಗಿ ಬೆಳೆದು ಬಂದರು. ‘ಬೈಲ ಕುರಲ್’, ‘ಮೇಘ ಮುರಾರಿ’, ‘ದೇವರ್ ಮುನಿಂಡ’, ‘ದೇವರ್ ಕೈಬುಡ್ನಗೆ’ ಇವರು ಅಭಿನಯಿಸಿದ ಜನಪ್ರಿಯ ತುಳು ನಾಟಕಗಳು. ಖಳನಾಯಕನ ಪಾತ್ರದ ಮೂಲಕ ಜನಮನ್ನಣೆ ಪಡೆದಿದ್ದ ಅವರು ನಾಯಕ ನಟರಾಗಿ, ಪೋಷಕ ನಟರಾಗಿ ಹಾಗೂ ಹಾಸ್ಯ ಕಲಾವಿದರಾಗಿಯೂ ಅಭಿನಯಿಸಿ ವಿಭಿನ್ನ ಪಾತ್ರಗಳಿಗು ಸೈ ಅನ್ನಿಸಿಕೊಂಡಿದ್ದರು. ಕನ್ನಡ ಟಿ.ವಿ ವಾಹಿನಿಯಲ್ಲಿ ಪ್ರಸಾರಾವಾದ ‘ಗೊತ್ತಾನಗ ಪೊರ್ತಾಂಡ್’ ತುಳು ಧಾರವಾಹಿಯಲ್ಲೂ ಅಭಿನಯಿಸಿದ್ದರು. ತುಳು ರಂಗಭೂಮಿಯಲ್ಲಿ ಸುಮಾರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ವಸಂತ ಶೆಟ್ಟಿ ಎಲ್ಲಾ ಪಾತ್ರಗಳಿಗೂ ಜೀವ ತುಂಬಿದವರು. ಎಡಪದವಿನ ರೆಸ್ಟೋರೆಂಟ್ ಒಂದರಲ್ಲಿ ಸುಮಾರು ೨೦ ವರ್ಷ ಕೆಲಸ ಮಾಡಿದ್ದು ನಂತರ ಮೂಡುಬಿದಿ ರೆಯಲ್ಲಿ ಶಿಕ್ಷಣ ಸಂಸ್ಥೆಯೊಂದರ ಕ್ಯಾಂಟೀನಲ್ಲು ಕೆಲಸ ಮಾಡಿದ್ದರು.


ಅನಾರೋಗ್ಯ ನಿಮಿತ್ತ ಒಂದು ವರ್ಷದಿಂದ ಮನೆಯಲ್ಲಿ ಇದ್ದರು. ಅವರಿಗೆ ಪತ್ನಿ, ಇಬ್ಬರು ಗಂಡು ವ ಮಕ್ಕಳಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

4 hours ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

9 hours ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

9 hours ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago