ಸುರತ್ಕಲ್ : ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು.
ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಹಿಳಾ ಮಂಡಳಿಯ ಸದಸ್ಯೆಯರು ಅಭಿನಯಿಸುವ ಬಾಲೆಗ್ ಒಲಿಯಿನ ಭ್ರಾಮರಿ ನಾಟಕ ಯಶಸ್ವಿಯಾಗಲಿ. ಈ ನಾಟಕದಲ್ಲಿ ಅಭಿನಯಿಸಿದ ಎಲ್ಲಾ ಕಲಾವಿದರಿಗೆ ಶ್ರೀ ಕ್ಷೇತ್ರದ ದೈವದ ಆಶೀರ್ವಾದ, ಅನುಗ್ರಹ ಇರಲಿ. ಕಟೀಲು ಭ್ರಾಮರಂಭಿಕೆಯ ಕತೆಯನ್ನಾಧರಿಸಿದ ನಾಟಕ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಯಶಸ್ಸು ಕಾಣಲಿ. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದರು. ಸಮಾರಂಭದಲ್ಲಿ ಪ್ರದ್ಯುಮ್ನ ರಾವ್ ಕಯ್ಯೂರು ಗುತ್ತು, ಸುಧಾಕರ್ ಶಿಬರೂರು, ತುಕಾರಾಮ್ ಶೆಟ್ಟಿ ಪರ್ಲಬೈಲು ಗುತ್ತು, ಸುಷಾಮ ಶೆಟ್ಟಿ ಶಿಬರೂರು ಗುತ್ತು, ಜಿತೇಂದ್ರ ಶೆಟ್ಟಿ ಕೊರ್ಯಾರ್ ಗುತ್ತು, ಸುಬ್ರಹ್ಮಣ್ಯ ಪ್ರಸಾದ್ ಕೊರಿಯರ್, ಮಹಿಳಾ ಮಂಡಳಿಯ ಅಧ್ಯೆಕ್ಷೆ ಸುಪ್ರಜಾ ಪ್ರಸಾದ್, ಸುಜಾತ ಶೆಟ್ಟಿ, ಸೂರಿಂಜೆ ಗ್ರಾಮಪಂಚಾಯತ್ ಅಧ್ಯೆಕ್ಷೆ ಗೀತಾ ಶೆಟ್ಟಿ, ಆಶಾ ಶೆಟ್ಟಿ ಶಿಬರೂರು, ಸಾರಿಕಾ ಶೆಟ್ಟಿ, ಸುಲೋಚನಾ ನವೀನ್, ನಾಟಕ ರಚನೆಕಾರ, ನಿರ್ದೇಶಕ ಪರಮಾನಂದ ಸಾಲ್ಯಾನ್ ಸಸಿಹಿತ್ಲು, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಬಾಲೆಗ್ ಒಲಿಯಿನ ಭ್ರಾಮರಿ ನಾಟಕದ ಪಾತ್ರಧಾರಿಗಳಿಗೆ ಪಾತ್ರಗಳ ವಿತರಣೆಯನ್ನು ಪರಮಾನಂದ ಸಾಲ್ಯಾನ್ ಮಾಡಿದರು. ಭಕ್ತಿ ಪ್ರಧಾನ ನಾಟಕದಲ್ಲಿ ಕಲಾವಿದರು ಶ್ರದ್ದಾ ಭಕ್ತಿಯಿಂದ ಪಾತ್ರ ನಿರ್ವಹಿಸುವಂತೆ ವಿನಂತಿಸಿದರು. ಮಹಿಳಾ ಮಂಡಳಿಯ ಸದಸ್ಯೆಯರಿಂದ ನಾಟಕ ಪ್ರದರ್ಶನಗೊಳ್ಳುತ್ತಿದೆ. ಆಶಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…