ಸುರತ್ಕಲ್ : ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು.
ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಹಿಳಾ ಮಂಡಳಿಯ ಸದಸ್ಯೆಯರು ಅಭಿನಯಿಸುವ ಬಾಲೆಗ್ ಒಲಿಯಿನ ಭ್ರಾಮರಿ ನಾಟಕ ಯಶಸ್ವಿಯಾಗಲಿ. ಈ ನಾಟಕದಲ್ಲಿ ಅಭಿನಯಿಸಿದ ಎಲ್ಲಾ ಕಲಾವಿದರಿಗೆ ಶ್ರೀ ಕ್ಷೇತ್ರದ ದೈವದ ಆಶೀರ್ವಾದ, ಅನುಗ್ರಹ ಇರಲಿ. ಕಟೀಲು ಭ್ರಾಮರಂಭಿಕೆಯ ಕತೆಯನ್ನಾಧರಿಸಿದ ನಾಟಕ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಯಶಸ್ಸು ಕಾಣಲಿ. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದರು. ಸಮಾರಂಭದಲ್ಲಿ ಪ್ರದ್ಯುಮ್ನ ರಾವ್ ಕಯ್ಯೂರು ಗುತ್ತು, ಸುಧಾಕರ್ ಶಿಬರೂರು, ತುಕಾರಾಮ್ ಶೆಟ್ಟಿ ಪರ್ಲಬೈಲು ಗುತ್ತು, ಸುಷಾಮ ಶೆಟ್ಟಿ ಶಿಬರೂರು ಗುತ್ತು, ಜಿತೇಂದ್ರ ಶೆಟ್ಟಿ ಕೊರ್ಯಾರ್ ಗುತ್ತು, ಸುಬ್ರಹ್ಮಣ್ಯ ಪ್ರಸಾದ್ ಕೊರಿಯರ್, ಮಹಿಳಾ ಮಂಡಳಿಯ ಅಧ್ಯೆಕ್ಷೆ ಸುಪ್ರಜಾ ಪ್ರಸಾದ್, ಸುಜಾತ ಶೆಟ್ಟಿ, ಸೂರಿಂಜೆ ಗ್ರಾಮಪಂಚಾಯತ್ ಅಧ್ಯೆಕ್ಷೆ ಗೀತಾ ಶೆಟ್ಟಿ, ಆಶಾ ಶೆಟ್ಟಿ ಶಿಬರೂರು, ಸಾರಿಕಾ ಶೆಟ್ಟಿ, ಸುಲೋಚನಾ ನವೀನ್, ನಾಟಕ ರಚನೆಕಾರ, ನಿರ್ದೇಶಕ ಪರಮಾನಂದ ಸಾಲ್ಯಾನ್ ಸಸಿಹಿತ್ಲು, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಬಾಲೆಗ್ ಒಲಿಯಿನ ಭ್ರಾಮರಿ ನಾಟಕದ ಪಾತ್ರಧಾರಿಗಳಿಗೆ ಪಾತ್ರಗಳ ವಿತರಣೆಯನ್ನು ಪರಮಾನಂದ ಸಾಲ್ಯಾನ್ ಮಾಡಿದರು. ಭಕ್ತಿ ಪ್ರಧಾನ ನಾಟಕದಲ್ಲಿ ಕಲಾವಿದರು ಶ್ರದ್ದಾ ಭಕ್ತಿಯಿಂದ ಪಾತ್ರ ನಿರ್ವಹಿಸುವಂತೆ ವಿನಂತಿಸಿದರು. ಮಹಿಳಾ ಮಂಡಳಿಯ ಸದಸ್ಯೆಯರಿಂದ ನಾಟಕ ಪ್ರದರ್ಶನಗೊಳ್ಳುತ್ತಿದೆ. ಆಶಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…