ಜನ ಮನದ ನಾಡಿ ಮಿಡಿತ

Advertisement

ಬಂಟ್ಚಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ

ಬಂಟ್ವಾಳ: ಬಂಟ್ಚಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಬಿಸಿರೋಡಿನ ಕಂದಾಯ ಇಲಾಖೆಯಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶಿಲ್ದಾರ್ ಅರ್ಚನಾ ಭಟ್ ವಹಿಸಿ ಮಾತನಾಡಿ, ಸರ್ವಜ್ಞ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ, ಅವರು ಸರ್ವರಿಗೂ ಆದರ್ಶಪ್ರಾಯವಾದ ಶ್ರೇಷ್ಠ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಸರ್ವಜ್ಞನ ಶ್ರೇಷ್ಠ ಜ್ಞಾನವನ್ನು ಮುಂದಿನ ಜನಾಂಗಕ್ಕೆ ಹೇಗೆ ತಿಳಿಸಿಕೊಡಬಹುದು ಎಂಬ ವಿಚಾರದ ಬಗ್ಗೆ ಯೋಚನೆ ಮಾಡಬೇಕಾಗಿದೆ.‌ ಸರಕಾರ ಇಂತಹ ಶ್ರೇಷ್ಠ ವ್ಯಕ್ತಿಗಳ ಆಚರಣೆ ಮಾಡಿರುವ ಸಂಗತಿ ಅತ್ಯಂತ ಸಂತಸದ ವಿಚಾರ ಎಂದು ತಿಳಿಸಿದರು.

ವಕೀಲರಾದ ಸುರೇಶ್ ನಾವೂರ ಮಾತನಾಡಿ, ಸಮಾಜದ ಅಂಕುಡೊಂಕುಗಳ ನಿವಾರಣೆಗಾಗಿ ಹೋರಾಟ ಮಾಡಿದ ಮಹಾನುಭಾವ ಸರ್ವಜ್ಞರು ಎಂದು ಅವರು ತಿಳಿಸಿದರು. ಇಂತಹ ಶ್ರೇಷ್ಠ ವ್ಯಕ್ತಿಗಳ ವ್ಯಕ್ತಿತ್ವವನ್ನು, ಆದರ್ಶಗಳನ್ನು ಅಳವಡಿಸಿಕೊಂಡರೆ ಜೀವನ ಮೌಲ್ಯ ವೃದ್ದಿಯಾಗುತ್ತದೆ,ಕಾರ್ಯಕ್ರಮಗಳು ಅರ್ಥಪೂರ್ಣವಾಗಬಹುದು ಎಂದು ಅವರು ತಿಳಿಸಿದರು. ವೇದಿಕೆಯಲ್ಲಿ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಯ್ಯ ಹನೈನಡೆ, ಬಂಟ್ವಾಳ ‌ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಯುವ ವೇದಿಕೆ ಅದ್ಯಕ್ಷ ನಿತೀಸ್ ಪಲ್ಲಿಕಂಡ, ರಾಜ್ಯ ಕುಲಾಲ ಕುಂಬಾರ ಮಹಿಳಾ ಸಂಘದ ಅದ್ಯಕ್ಷೆ ನಳಿನಿಮಹಾಬಲ ಯುವ ವೇದಿಕೆ ಮಹಿಳಾ ಸಂಘದ ಅಧ್ಯಕ್ಷೆ ವಿಜಯಶ್ರೀ ಪುರುಷೋತ್ತಮ , ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ಉಪತಹಶೀಲ್ದಾರ್ ದಿವಾಕರ ‌ಮುಗುಳಿಯ, ಕಂದಾಯ ನಿರೀಕ್ಷಕ ವಿಜಯ ಆರ್,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕಂದಾಯ ನಿರೀಕ್ಷಕ ಜನಾರ್ದನ ಜೆ.ಸ್ವಾಗತಿಸಿದರು. ಶ್ರೀಕಲಾ ವಂದಿಸಿದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!