ಬಂಟ್ವಾಳ: ಬಂಟ್ಚಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಬಿಸಿರೋಡಿನ ಕಂದಾಯ ಇಲಾಖೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶಿಲ್ದಾರ್ ಅರ್ಚನಾ ಭಟ್ ವಹಿಸಿ ಮಾತನಾಡಿ, ಸರ್ವಜ್ಞ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ, ಅವರು ಸರ್ವರಿಗೂ ಆದರ್ಶಪ್ರಾಯವಾದ ಶ್ರೇಷ್ಠ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಸರ್ವಜ್ಞನ ಶ್ರೇಷ್ಠ ಜ್ಞಾನವನ್ನು ಮುಂದಿನ ಜನಾಂಗಕ್ಕೆ ಹೇಗೆ ತಿಳಿಸಿಕೊಡಬಹುದು ಎಂಬ ವಿಚಾರದ ಬಗ್ಗೆ ಯೋಚನೆ ಮಾಡಬೇಕಾಗಿದೆ. ಸರಕಾರ ಇಂತಹ ಶ್ರೇಷ್ಠ ವ್ಯಕ್ತಿಗಳ ಆಚರಣೆ ಮಾಡಿರುವ ಸಂಗತಿ ಅತ್ಯಂತ ಸಂತಸದ ವಿಚಾರ ಎಂದು ತಿಳಿಸಿದರು.
ವಕೀಲರಾದ ಸುರೇಶ್ ನಾವೂರ ಮಾತನಾಡಿ, ಸಮಾಜದ ಅಂಕುಡೊಂಕುಗಳ ನಿವಾರಣೆಗಾಗಿ ಹೋರಾಟ ಮಾಡಿದ ಮಹಾನುಭಾವ ಸರ್ವಜ್ಞರು ಎಂದು ಅವರು ತಿಳಿಸಿದರು. ಇಂತಹ ಶ್ರೇಷ್ಠ ವ್ಯಕ್ತಿಗಳ ವ್ಯಕ್ತಿತ್ವವನ್ನು, ಆದರ್ಶಗಳನ್ನು ಅಳವಡಿಸಿಕೊಂಡರೆ ಜೀವನ ಮೌಲ್ಯ ವೃದ್ದಿಯಾಗುತ್ತದೆ,ಕಾರ್ಯಕ್ರಮಗಳು ಅರ್ಥಪೂರ್ಣವಾಗಬಹುದು ಎಂದು ಅವರು ತಿಳಿಸಿದರು. ವೇದಿಕೆಯಲ್ಲಿ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಯ್ಯ ಹನೈನಡೆ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಯುವ ವೇದಿಕೆ ಅದ್ಯಕ್ಷ ನಿತೀಸ್ ಪಲ್ಲಿಕಂಡ, ರಾಜ್ಯ ಕುಲಾಲ ಕುಂಬಾರ ಮಹಿಳಾ ಸಂಘದ ಅದ್ಯಕ್ಷೆ ನಳಿನಿಮಹಾಬಲ ಯುವ ವೇದಿಕೆ ಮಹಿಳಾ ಸಂಘದ ಅಧ್ಯಕ್ಷೆ ವಿಜಯಶ್ರೀ ಪುರುಷೋತ್ತಮ , ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ಉಪತಹಶೀಲ್ದಾರ್ ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕ ವಿಜಯ ಆರ್,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕಂದಾಯ ನಿರೀಕ್ಷಕ ಜನಾರ್ದನ ಜೆ.ಸ್ವಾಗತಿಸಿದರು. ಶ್ರೀಕಲಾ ವಂದಿಸಿದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…