ಬಂಟ್ವಾಳ: ಬಂಟ್ಚಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಬಿಸಿರೋಡಿನ ಕಂದಾಯ ಇಲಾಖೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶಿಲ್ದಾರ್ ಅರ್ಚನಾ ಭಟ್ ವಹಿಸಿ ಮಾತನಾಡಿ, ಸರ್ವಜ್ಞ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ, ಅವರು ಸರ್ವರಿಗೂ ಆದರ್ಶಪ್ರಾಯವಾದ ಶ್ರೇಷ್ಠ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಸರ್ವಜ್ಞನ ಶ್ರೇಷ್ಠ ಜ್ಞಾನವನ್ನು ಮುಂದಿನ ಜನಾಂಗಕ್ಕೆ ಹೇಗೆ ತಿಳಿಸಿಕೊಡಬಹುದು ಎಂಬ ವಿಚಾರದ ಬಗ್ಗೆ ಯೋಚನೆ ಮಾಡಬೇಕಾಗಿದೆ. ಸರಕಾರ ಇಂತಹ ಶ್ರೇಷ್ಠ ವ್ಯಕ್ತಿಗಳ ಆಚರಣೆ ಮಾಡಿರುವ ಸಂಗತಿ ಅತ್ಯಂತ ಸಂತಸದ ವಿಚಾರ ಎಂದು ತಿಳಿಸಿದರು.
ವಕೀಲರಾದ ಸುರೇಶ್ ನಾವೂರ ಮಾತನಾಡಿ, ಸಮಾಜದ ಅಂಕುಡೊಂಕುಗಳ ನಿವಾರಣೆಗಾಗಿ ಹೋರಾಟ ಮಾಡಿದ ಮಹಾನುಭಾವ ಸರ್ವಜ್ಞರು ಎಂದು ಅವರು ತಿಳಿಸಿದರು. ಇಂತಹ ಶ್ರೇಷ್ಠ ವ್ಯಕ್ತಿಗಳ ವ್ಯಕ್ತಿತ್ವವನ್ನು, ಆದರ್ಶಗಳನ್ನು ಅಳವಡಿಸಿಕೊಂಡರೆ ಜೀವನ ಮೌಲ್ಯ ವೃದ್ದಿಯಾಗುತ್ತದೆ,ಕಾರ್ಯಕ್ರಮಗಳು ಅರ್ಥಪೂರ್ಣವಾಗಬಹುದು ಎಂದು ಅವರು ತಿಳಿಸಿದರು. ವೇದಿಕೆಯಲ್ಲಿ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಯ್ಯ ಹನೈನಡೆ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಯುವ ವೇದಿಕೆ ಅದ್ಯಕ್ಷ ನಿತೀಸ್ ಪಲ್ಲಿಕಂಡ, ರಾಜ್ಯ ಕುಲಾಲ ಕುಂಬಾರ ಮಹಿಳಾ ಸಂಘದ ಅದ್ಯಕ್ಷೆ ನಳಿನಿಮಹಾಬಲ ಯುವ ವೇದಿಕೆ ಮಹಿಳಾ ಸಂಘದ ಅಧ್ಯಕ್ಷೆ ವಿಜಯಶ್ರೀ ಪುರುಷೋತ್ತಮ , ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ಉಪತಹಶೀಲ್ದಾರ್ ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕ ವಿಜಯ ಆರ್,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕಂದಾಯ ನಿರೀಕ್ಷಕ ಜನಾರ್ದನ ಜೆ.ಸ್ವಾಗತಿಸಿದರು. ಶ್ರೀಕಲಾ ವಂದಿಸಿದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…