ಬಂಟ್ವಾಳ: ಬಂಟ್ಚಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಬಿಸಿರೋಡಿನ ಕಂದಾಯ ಇಲಾಖೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶಿಲ್ದಾರ್ ಅರ್ಚನಾ ಭಟ್ ವಹಿಸಿ ಮಾತನಾಡಿ, ಸರ್ವಜ್ಞ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ, ಅವರು ಸರ್ವರಿಗೂ ಆದರ್ಶಪ್ರಾಯವಾದ ಶ್ರೇಷ್ಠ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಸರ್ವಜ್ಞನ ಶ್ರೇಷ್ಠ ಜ್ಞಾನವನ್ನು ಮುಂದಿನ ಜನಾಂಗಕ್ಕೆ ಹೇಗೆ ತಿಳಿಸಿಕೊಡಬಹುದು ಎಂಬ ವಿಚಾರದ ಬಗ್ಗೆ ಯೋಚನೆ ಮಾಡಬೇಕಾಗಿದೆ. ಸರಕಾರ ಇಂತಹ ಶ್ರೇಷ್ಠ ವ್ಯಕ್ತಿಗಳ ಆಚರಣೆ ಮಾಡಿರುವ ಸಂಗತಿ ಅತ್ಯಂತ ಸಂತಸದ ವಿಚಾರ ಎಂದು ತಿಳಿಸಿದರು.
ವಕೀಲರಾದ ಸುರೇಶ್ ನಾವೂರ ಮಾತನಾಡಿ, ಸಮಾಜದ ಅಂಕುಡೊಂಕುಗಳ ನಿವಾರಣೆಗಾಗಿ ಹೋರಾಟ ಮಾಡಿದ ಮಹಾನುಭಾವ ಸರ್ವಜ್ಞರು ಎಂದು ಅವರು ತಿಳಿಸಿದರು. ಇಂತಹ ಶ್ರೇಷ್ಠ ವ್ಯಕ್ತಿಗಳ ವ್ಯಕ್ತಿತ್ವವನ್ನು, ಆದರ್ಶಗಳನ್ನು ಅಳವಡಿಸಿಕೊಂಡರೆ ಜೀವನ ಮೌಲ್ಯ ವೃದ್ದಿಯಾಗುತ್ತದೆ,ಕಾರ್ಯಕ್ರಮಗಳು ಅರ್ಥಪೂರ್ಣವಾಗಬಹುದು ಎಂದು ಅವರು ತಿಳಿಸಿದರು. ವೇದಿಕೆಯಲ್ಲಿ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಯ್ಯ ಹನೈನಡೆ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಯುವ ವೇದಿಕೆ ಅದ್ಯಕ್ಷ ನಿತೀಸ್ ಪಲ್ಲಿಕಂಡ, ರಾಜ್ಯ ಕುಲಾಲ ಕುಂಬಾರ ಮಹಿಳಾ ಸಂಘದ ಅದ್ಯಕ್ಷೆ ನಳಿನಿಮಹಾಬಲ ಯುವ ವೇದಿಕೆ ಮಹಿಳಾ ಸಂಘದ ಅಧ್ಯಕ್ಷೆ ವಿಜಯಶ್ರೀ ಪುರುಷೋತ್ತಮ , ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ಉಪತಹಶೀಲ್ದಾರ್ ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕ ವಿಜಯ ಆರ್,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕಂದಾಯ ನಿರೀಕ್ಷಕ ಜನಾರ್ದನ ಜೆ.ಸ್ವಾಗತಿಸಿದರು. ಶ್ರೀಕಲಾ ವಂದಿಸಿದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…