ಜನ ಮನದ ನಾಡಿ ಮಿಡಿತ

Advertisement

ಹೃದಯಸ್ಪರ್ಶಿ ಸನ್ನಿವೇಶಕ್ಕೆ ಸಾಕ್ಷಿಯಾದ ನಳೀಲು ಬ್ರಹ್ಮಕಲಶೋತ್ಸವದ ವೇದಿಕೆ

ಪುತ್ತೂರು : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆ ಹೃದಯಸ್ಪರ್ಶಿ ಸನ್ನವೇಶಕ್ಕೆ ಸಾಕ್ಷಿಯಾಯಿತು.

ಫೆ.19ರಂದು ಮಧ್ಯಾಹ್ನ ಮಣಿಕ್ಕರ ಸ.ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದವರನ್ನು ನೆನಪಿಸುವ ಕಿರು ನಾಟಕ ನಡೆಯಿತು.

ಈ ಸಂಧರ್ಭದಲ್ಲಿ ಮಣಿಕ್ಕರ ಶಾಲೆಗೆ 2 ಕೊಠಡಿಗಳನ್ನು ನಿರ್ಮಿಸಿಕೊಟ್ಟ ಹಾಗೂ ವಿವಿಧ ಯೋಜನೆಗಳಿಗೆ ಕೈ ಜೋಡಿಸಿರುವ ಶಾಲಾ ಹಿರಿಯ ವಿದ್ಯಾರ್ಥಿ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ಅವರಿಗೆ ಕೃತಜ್ಞತೆ ಸಲ್ಲಿಸುವ ಸನ್ನಿವೇಶ ಹೃದಯಸ್ಪರ್ಶಿಯಾಗಿತ್ತು.

ಶಾಲಾ ಮಕ್ಕಳಿಂದ ಹಿಡಿದು ಶಿಕ್ಷಕರು ,ಪೋಷಕರು ಸಂತೋಷ್ ಕುಮಾರ್ ರೈ ಅವರನ್ನು ಗುಲಾಬಿ ಹೂವುಗಳನ್ನು ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ರೈ ಅವರ ಅಕ್ಕ ಮಣಿಕ್ಕರ ಶಾಲಾ ಹಿರಿಯ ವಿದ್ಯಾರ್ಥಿನಿ ಡಾ‌.ಸುಚೇತಾ ಜೆ.ಶೆಟ್ಟಿ ,ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ.ವೀಣಾ ಸಂತೋಷ್ ರೈ ,ಪುತ್ರಿ ಪ್ರಿಶಾ ರೈ ಮೊದಲಾದವರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!