ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನ ಕಡಲ ಕಿನಾರೆಯಲ್ಲಿ ಜಾನಪದ ಕಡಲೊತ್ಸವಕ್ಕೆ ಸಾಗಿದೆ ಭರದ ಸಿದ್ಧತೆ

ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಕದಳಿ ಬೀಚ್ ಟೂರಿಸಂ ಸಹಕಾರದೊಂದಿಗೆ ದಿನಾಂಕ ಮಾರ್ಚ್ ಒಂದರಿಂದ ಮೂರರವರೆಗೆ ಮೂರು ದಿನಗಳ ಕಾಲ ಮಂಗಳೂರು ಪಣಂಬೂರಿನ( ಪಣಂಬೂರು ಬೀಚ್ ) ಕಡಲಕಿನಾರೆಯಲ್ಲಿ ಹಮ್ಮಿಕೊಂಡಿರುವ “ಜಾನಪದ ಕಡಲೋತ್ಸವ” ಎಂಬ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಕಡಲೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದ ರಾಜ್ಯಪಾಲರು ಉದ್ಘಾಟಿಸಲಿದ್ದು ಕಾರ್ಯಕ್ರಮದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಮೈಸೂರು ಇವರನ್ನು ಸನ್ಮಾನಿಸಲಾಗುವುದು ಎಂದು ಜಾನಪದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಲ್ ಬೈಲ್ ತಿಳಿಸಿದ್ದಾರೆ.


ಕಡಲೋತ್ಸವ ಕಾರ್ಯಕ್ರಮದಲ್ಲಿ ಜಾನಪದ ಪ್ರದರ್ಶನ, ಜಾನಪದ ಕಾರ್ಯಕ್ರಮ, ಆಹಾರ ಮೇಳ, ಗಾಳಿಪಟ ಉತ್ಸವ ವಿಶೇಷ ಆಕರ್ಷಣೆಯಾಗಿದ್ದು, ಕ್ರಮವಾಗಿ ಮೂರು ದಿನಗಳಲ್ಲಿ ಡಾ.ರಮೇಶ್ಚಂದ್ರ ಮತ್ತು ಕಲಾವತಿ ಬಳಗದವರಿಂದ ಜಾನಪದ ರಸ ಸಂಜೆ ಸಂಗೀತ ಕಾರ್ಯಕ್ರಮ, ಅಜಯ್ ವಾರಿಯರ್ ಮತ್ತು ತಂಡದವರಿಂದ ಸಂಗೀತರಸಮಂಜರಿ, ಹಾಗೂ ಮಣಿಕಾಂತ್ ಕದ್ರಿ ತಂಡದಿಂದ ಕಡಲಗೀತೆ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಾನಪದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್ ವಿನಂತಿಸಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಆಶಯದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು, ಜಾನಪದ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರ ಆದೇಶದಂತೆ ಜಿಲ್ಲೆಯ ಎಲ್ಲಾ ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆಯೂ ಯಾವುದೇ ಗೊಂದಲಗಳಿಲ್ಲದೆ ನೆರವೇರಿದ್ದು, ಈಗಾಗಲೇ ಜಿಲ್ಲೆಯ ಎಲ್ಲಾ ಘಟಕಗಳು ಕಾರ್ಯಪ್ರವೃತ್ತರಾಗಿವೆ.


ಜಾನಪದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರುಗಳು, ಸಂಚಾಲಕರು, ಕಾರ್ಯದರ್ಶಿ, ಸಹಿತ ಎಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲೆಯ ಇತರ ತಾಲೂಕು ಜಾನಪದ ಘಟಕಗಳ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳಿಗೆ ಜಾನಪದ ಕಡಲೋತ್ಸವ ಯಶಸ್ವಿಯಾಗುವ ಸಲುವಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು,ಕಾರ್ಯಕ್ರಮದ ಸಿದ್ಧತೆ ಭರದಿಂದ ಸಾಗಿದೆ ಎಂದು ವರದಿಯಾಗಿದೆ.
ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ನಗರದಲ್ಲಿ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದ್ದು, ಸಂಪೂರ್ಣ ಸಿದ್ಧತೆ ಬಗ್ಗೆ ಚರ್ಚೆಯಾಗಲಿದೆ, ಎಂದು ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!