ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಕದಳಿ ಬೀಚ್ ಟೂರಿಸಂ ಸಹಕಾರದೊಂದಿಗೆ ದಿನಾಂಕ ಮಾರ್ಚ್ ಒಂದರಿಂದ ಮೂರರವರೆಗೆ ಮೂರು ದಿನಗಳ ಕಾಲ ಮಂಗಳೂರು ಪಣಂಬೂರಿನ( ಪಣಂಬೂರು ಬೀಚ್ ) ಕಡಲಕಿನಾರೆಯಲ್ಲಿ ಹಮ್ಮಿಕೊಂಡಿರುವ “ಜಾನಪದ ಕಡಲೋತ್ಸವ” ಎಂಬ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಕಡಲೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದ ರಾಜ್ಯಪಾಲರು ಉದ್ಘಾಟಿಸಲಿದ್ದು ಕಾರ್ಯಕ್ರಮದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಮೈಸೂರು ಇವರನ್ನು ಸನ್ಮಾನಿಸಲಾಗುವುದು ಎಂದು ಜಾನಪದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಲ್ ಬೈಲ್ ತಿಳಿಸಿದ್ದಾರೆ.
ಕಡಲೋತ್ಸವ ಕಾರ್ಯಕ್ರಮದಲ್ಲಿ ಜಾನಪದ ಪ್ರದರ್ಶನ, ಜಾನಪದ ಕಾರ್ಯಕ್ರಮ, ಆಹಾರ ಮೇಳ, ಗಾಳಿಪಟ ಉತ್ಸವ ವಿಶೇಷ ಆಕರ್ಷಣೆಯಾಗಿದ್ದು, ಕ್ರಮವಾಗಿ ಮೂರು ದಿನಗಳಲ್ಲಿ ಡಾ.ರಮೇಶ್ಚಂದ್ರ ಮತ್ತು ಕಲಾವತಿ ಬಳಗದವರಿಂದ ಜಾನಪದ ರಸ ಸಂಜೆ ಸಂಗೀತ ಕಾರ್ಯಕ್ರಮ, ಅಜಯ್ ವಾರಿಯರ್ ಮತ್ತು ತಂಡದವರಿಂದ ಸಂಗೀತರಸಮಂಜರಿ, ಹಾಗೂ ಮಣಿಕಾಂತ್ ಕದ್ರಿ ತಂಡದಿಂದ ಕಡಲಗೀತೆ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಾನಪದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್ ವಿನಂತಿಸಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಆಶಯದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು, ಜಾನಪದ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರ ಆದೇಶದಂತೆ ಜಿಲ್ಲೆಯ ಎಲ್ಲಾ ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆಯೂ ಯಾವುದೇ ಗೊಂದಲಗಳಿಲ್ಲದೆ ನೆರವೇರಿದ್ದು, ಈಗಾಗಲೇ ಜಿಲ್ಲೆಯ ಎಲ್ಲಾ ಘಟಕಗಳು ಕಾರ್ಯಪ್ರವೃತ್ತರಾಗಿವೆ.
ಜಾನಪದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರುಗಳು, ಸಂಚಾಲಕರು, ಕಾರ್ಯದರ್ಶಿ, ಸಹಿತ ಎಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲೆಯ ಇತರ ತಾಲೂಕು ಜಾನಪದ ಘಟಕಗಳ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳಿಗೆ ಜಾನಪದ ಕಡಲೋತ್ಸವ ಯಶಸ್ವಿಯಾಗುವ ಸಲುವಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು,ಕಾರ್ಯಕ್ರಮದ ಸಿದ್ಧತೆ ಭರದಿಂದ ಸಾಗಿದೆ ಎಂದು ವರದಿಯಾಗಿದೆ.
ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ನಗರದಲ್ಲಿ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದ್ದು, ಸಂಪೂರ್ಣ ಸಿದ್ಧತೆ ಬಗ್ಗೆ ಚರ್ಚೆಯಾಗಲಿದೆ, ಎಂದು ಸಂಘಟಕರು ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…