ಮನೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರಿಬ್ಬರು 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ನಡೆದಿದೆ.
ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಾರೆ. ಬಳಿಕ ಮನೆಯವರ ವಿರೋಧದ ನಡುವೆಯೂ ಸೀದಾ ಮನೆಯೊಳಗೆ ಬಂದು ಮಹೀಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು ಅಪರಿಚಿತ ಹೆಂಗಸು ಎತ್ತಿಕೊಂಡು ಹೋದ ಮಗುವನ್ನು ಕರೆದುಕೊಂಡು ಬಂದಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಮಹಿಮಾ ಅವರ ಅಣ್ಣ ಬಂದಿದ್ದನ್ನು ನೋಡಿದ ಆರೋಪಿಗಳು ಅಲ್ಲಿಂದ ಓಡಿ ಹೋಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…