ಕರಾವಳಿ ಕರ್ನಾಟಕದ ಕಲಾವಿದರಿಗೆ ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನಿನ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದೆ.
ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಗುಡ್ಡಪ್ಪ ಸುವರ್ಣರಿಗೆ, ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ ಪಟ್ಲ ಫೌಂಡೇಶನಿನ ಮೂಲಕ ನೂತನ ಮನೆಯನ್ನು ನಿರ್ಮಿಸಿ ಗೃಹಪ್ರವೇಶ ಕಾರ್ಯಕ್ರಮ ನೆರವೇರಿಸಿ ಬಳಿಕ ಮನೆಯನ್ನು ಹಸ್ತಾಂತರಿಸಲಾಯಿತು.
ಕೊಡುಗೈ ದಾನಿಗಳು, ಫೌಂಡೇಶನಿನ ಮಹಾದಾನಿಗಳೂ ಆದ ಶಶಿಧರ ಬಿ.ಶೆಟ್ಟಿ ಬರೋಡರವರ ಹೆಸರಿನಲ್ಲಿ ಈ ಮನೆಯನ್ನು ನಿರ್ಮಿಸಲಾಗಿದ್ದು, ನೂತನ ಮನೆಯ ಕೀ ಯನ್ನ ಗುಡ್ಡಪ್ಪ ಸುವರ್ಣ ದಂಪತಿಗೆ ನಿಡಲಾಯಿತು. ದಂಪತಿ ಮಹಾದಾನಿಗಳಾದ ಶಶಿಧರ ಬಿ ಶೆಟ್ಟಿ ಬರೋಡವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಪುತ್ತೂರು ಘಟಕದ ಗೌರವಾಧ್ಯಕ್ಷರಾದ ಸವಣೂರು ಸೀತಾರಾಮ ರೈ, ಹಿರಿಯ ಕಲಾವಿದರಾದ ಸರಪಾಡಿ ಅಶೋಕ್ ಶೆಟ್ಟಿ, ಸಸಿಹಿತ್ಲು ಮೇಳದ ಯಜಮಾನರಾದ ರಾಜೇಶ್ ಗುಜರನ್, ಸುಳ್ಯ ಘಟಕದ ಶ್ರೀನಾಥ್ ರೈ, ಪ್ರೀತಮ್ ರೈ, ಬೆಳ್ಳಾರೆ ರಮೇಶ್ ರೈ, ಪ್ರಶಾಂತ್ ರೈ ಪಂಜ, ಡಾ. ಪ್ರಖ್ಯಾತ ಶೆಟ್ಟಿ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…