ಕರಾವಳಿ ಕರ್ನಾಟಕದ ಕಲಾವಿದರಿಗೆ ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನಿನ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದೆ.
ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಗುಡ್ಡಪ್ಪ ಸುವರ್ಣರಿಗೆ, ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ ಪಟ್ಲ ಫೌಂಡೇಶನಿನ ಮೂಲಕ ನೂತನ ಮನೆಯನ್ನು ನಿರ್ಮಿಸಿ ಗೃಹಪ್ರವೇಶ ಕಾರ್ಯಕ್ರಮ ನೆರವೇರಿಸಿ ಬಳಿಕ ಮನೆಯನ್ನು ಹಸ್ತಾಂತರಿಸಲಾಯಿತು.
ಕೊಡುಗೈ ದಾನಿಗಳು, ಫೌಂಡೇಶನಿನ ಮಹಾದಾನಿಗಳೂ ಆದ ಶಶಿಧರ ಬಿ.ಶೆಟ್ಟಿ ಬರೋಡರವರ ಹೆಸರಿನಲ್ಲಿ ಈ ಮನೆಯನ್ನು ನಿರ್ಮಿಸಲಾಗಿದ್ದು, ನೂತನ ಮನೆಯ ಕೀ ಯನ್ನ ಗುಡ್ಡಪ್ಪ ಸುವರ್ಣ ದಂಪತಿಗೆ ನಿಡಲಾಯಿತು. ದಂಪತಿ ಮಹಾದಾನಿಗಳಾದ ಶಶಿಧರ ಬಿ ಶೆಟ್ಟಿ ಬರೋಡವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಪುತ್ತೂರು ಘಟಕದ ಗೌರವಾಧ್ಯಕ್ಷರಾದ ಸವಣೂರು ಸೀತಾರಾಮ ರೈ, ಹಿರಿಯ ಕಲಾವಿದರಾದ ಸರಪಾಡಿ ಅಶೋಕ್ ಶೆಟ್ಟಿ, ಸಸಿಹಿತ್ಲು ಮೇಳದ ಯಜಮಾನರಾದ ರಾಜೇಶ್ ಗುಜರನ್, ಸುಳ್ಯ ಘಟಕದ ಶ್ರೀನಾಥ್ ರೈ, ಪ್ರೀತಮ್ ರೈ, ಬೆಳ್ಳಾರೆ ರಮೇಶ್ ರೈ, ಪ್ರಶಾಂತ್ ರೈ ಪಂಜ, ಡಾ. ಪ್ರಖ್ಯಾತ ಶೆಟ್ಟಿ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…