ಬಂಟ್ವಾಳ: ತಾಲೂಕಿನ ಬರಿಮಾರು ಗ್ರಾಮದ ಬಲ್ಯ ನಿವಾಸಿ ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ಪ್ರಾಕ್ಟೀಸ್ ಮಾಡುತ್ತಿರುವ ಅನಿಲ್ ಜಾನ್ ಸಿಕ್ವೇರಾ ಅವರು ತನ್ನ ೨೫ನೇ ವಯಸ್ಸಿನಲ್ಲಿ ಕರ್ನಾಟಕ ಸಿವಿಲ್ ಕಿರಿಯ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.
ಬರಿಮಾರಿನ ಎವರೆಸ್ಟ್ ಸಿಕ್ವೇರಾ ಹಾಗೂ ಐವಿ ಸಿಕ್ವೇರಾ ದಂಪತಿಯ ಪುತ್ರನಾಗಿರುವ ಅವರು
ಬರಿಮಾರು ಸಂತ ಜೋಸೆಫರ ಅನುದಾನಿತ ಶಾಲೆಯಲ್ಲಿ ಪ್ರಾಥಮಿಕ, ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಪ್ರೌಢ, ಪುತ್ತೂರು ಸಂತ ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ಪಿಯುಸಿ ಹಾಗೂ ಮಂಗಳೂರು ಎಸ್.ಡಿ.ಎಂ.ಕಾನೂನು ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದು ಕಳೆದ ೨ ವರ್ಷಗಳಿಂದ ಪ್ರಾರಂಭದಲ್ಲಿ ಮಂಗಳೂರಿನ ನ್ಯಾಯವಾದಿ ವರದರಾಜ ಅವರ ಬಳಿ, ಪ್ರಸ್ತುತ ನ್ಯಾಯವಾದಿಗಳಾದ ಪ್ರವೀಣ್ ಡಿಸೋಜ, ನವೀನ್ ಪಾಯಿಸ್ ಅವರ ಬಳಿ ಪ್ರಾಕ್ಟೀಸ್ ಮಾಡುತ್ತಿದ್ದರು. ಕಳೆದ ನವೆಂಬರ್ ತಿಂಗಳಲ್ಲಿ ಅವರು ನ್ಯಾಯಾಧೀಶರ ಹುದ್ದೆಗೆ ಮುಖ್ಯಪರೀಕ್ಷೆ ಬರೆದಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…