ಕರಾವಳಿ

ಮಂಗಳೂರಿನಲ್ಲಿ ಮಾರ್ಚ್ 1ರಿಂದ 3 ವರೆಗೆ ಜಾನಪದ ಕಡಲೋತ್ಸವ; ಕಡಲ ಕಿನಾರೆಯಲ್ಲಿ ಮೇಳೈಸಲಿದೆ ಜಾನಪದ ಸಂಭ್ರಮ, ಆಹಾರ ಮೇಳ, ಗಾಳಿಪಟ ಪ್ರದರ್ಶನ

ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಕದಳಿ ಬೀಚ್ ಟೂರಿಸಂ ಸಹಕಾರದೊಂದಿಗೆ ದಿನಾಂಕ ಮಾರ್ಚ್ ಒಂದರಿಂದ ಮೂರರವರೆಗೆ ಮೂರು ದಿನಗಳ ಕಾಲ ಮಂಗಳೂರು ಪಣಂಬೂರಿನ( ಪಣಂಬೂರು ಬೀಚ್ ) ಕಡಲಕಿನಾರೆಯಲ್ಲಿ ಹಮ್ಮಿಕೊಂಡಿರುವ “ಜಾನಪದ ಕಡಲೋತ್ಸವ” ಎಂಬ ಬೃಹತ್ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಕಡಲೋತ್ಸವ ಕರ್ನಾಟಕ ರಾಜ್ಯದ ರಾಜ್ಯಪಾಲರು ಉದ್ಘಾಟಿಸಲಿದ್ದು ಕಾರ್ಯಕ್ರಮದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಮೈಸೂರು ಇವರನ್ನು ಸನ್ಮಾನಿಸಲಾಗುವುದು ಎಂದು ಜಾನಪದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ..


ಕಡಲೋತ್ಸವ ಕಾರ್ಯಕ್ರಮದಲ್ಲಿ ಜಾನಪದ ಪ್ರದರ್ಶನ, ಆಹಾರ ಮೇಳ, ಗಾಳಿಪಟ ಉತ್ಸವ ವಿಶೇಷ ಆಕರ್ಷಣೆಯಾಗಿದ್ದು, ಕ್ರಮವಾಗಿ ಮೂರು ದಿನಗಳಲ್ಲಿ ಡಾ.ರಮೇಶ್ಚಂದ್ರ ಮತ್ತು ಕಲಾವತಿ ಬಳಗದವರಿಂದ ಜಾನಪದ ರಸ ಸಂಜೆ ಸಂಗೀತ ಕಾರ್ಯಕ್ರಮ, ಅಜಯ್ ವಾರಿಯರ್ ಮತ್ತು ತಂಡದವರಿಂದ ಸಂಗೀತರಸಮಂಜರಿ, ಹಾಗೂ ಮಣಿಕಾಂತ್ ಕದ್ರಿ ತಂಡದಿಂದ ಕಡಲಗೀತೆ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಾನಪದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಮುಖರು ಕರೆ ನೀಡಿದರು.


14 ಮಂದಿ ಜನಪದಿಯರಿಗೆ ಕರ್ನಾಟಕ ಜನಪದ ಪರಿಷತ್ ಪ್ರಶಸ್ತಿ
ಮಾರ್ಚ್ 1ರಿಂದ 3 ರವರೆಗೆ ನಡೆಯುವ ಜಾನಪದ ಕಡಲೊತ್ಸವ -2024 ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ 14 ಮಂದಿ ವಿವಿಧ ಕ್ಷೇತ್ರದ ಜನಪದ ಕಲಾವಿದರು, ದೈವ ನರ್ತಕರು, ಜನಪದ ಸಂಘಟಕರು ಹಾಗೂ ನಾಟಿ ವೈದ್ಯರುಗಳನ್ನು ಗುರುತಿಸಿ ಕರ್ನಾಟಕ ಜಾನಪದ ಪರಿಷತ್ ಪ್ರಸಸ್ತಿಯನ್ನು ಘೋಷಿಸಲಾಗಿದೆ.

ಮಾರ್ಚ್ 2 ಮತ್ತು 3 ರಂದು ಸಂಜೆ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಜನಪದ ಪ್ರಶಸ್ತಿಗೆ ಶ್ರೀ ದೊಡ್ಡಣ್ಣ ಬರಮೇಲು ಸುಳ್ಯ ಜಾನಪದ ಕ್ರೀಡಾ ಸಂಘಟಕರು, ಶ್ರೀಮತಿ ಭವಾನಿ ಪೆರ್ಗಡೆ ತೊಕೆಮನೆ, ಶ್ರೀ ಎ.ಕೇಪು ಅಜಿಲ ಸುಳ್ಯ ಜಾನಪದ ಕಲಾವಿದ, ಸದಾನಂದ ನಾರಾವಿ, ಜಾನಪದ ಸಾಹಿತಿ, ಶ್ರೀ ಬೇಬಿ ಪೂಜಾರಿ, ನಾಟಿವೈದ್ಯರು ಪಿಲ್ಯ, ಬೆಳ್ತಂಗಡಿ ತಾಲೂಕು, ಶ್ರೀಮತಿ ಕರ್ಗಿ ಶೆಡ್ತಿ, ಅಳದಂಗಡಿ ಬೆಳ್ತಂಗಡಿ ತಾಲೂಕು, ಮೇರಿಜೋನ್ ಜಾನಪದ ಸಂಘಟಕಿ ಮತ್ತು ಕಲಾವಿದೆ, ಬೀಪಾತುಮ್ಮ, ಆತೂರು ಕೊಯಿಲ
ತುಳು, ಬ್ಯಾರಿ, ಜಾನಪದ ಕಲಾವಿದರು ಮತ್ತು ನಾಟಿ ವೈದ್ಯರು, ಶ್ರೀಮತಿ ಅಪ್ಪಿ ಶೆಟ್ಟಿ ಕಿನ್ನಿಗೋಳಿ,ಕಿಟ್ಟ ಮಲೆಕುಡಿಯ ಜಾನಪದ ಕಲಾವಿದರು,ಮೈಮ್ ರಮೇಶ್ ಮಂಗಳೂರು,ಶ್ರೀಮತಿಹು ವೆಂಕಮ್ಮ ಈಶ್ವರ ಮಂಗಳ ನಾಟಿ ವೈದ್ಯರು,ಕರಿಯ ಅಜಿಲ ಕಡ್ಯ ಪುತ್ತೂರು, ದೈವ ನರ್ತಕ,ಉಗ್ಗಪ್ಪ ಪೂಜಾರಿ ಮೂಡಬಿದಿರಿ, ಪಾಡ್ದನ ಕಲಾವಿದರನ್ನು ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಮೂರು ದಿನಗಳು ಕಡಲ ಕಿನಾರೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಸಂಘಟನೆಯ ಮುಖ್ಯಸ್ಥರುಗಳು, ಅಧಿಕಾರಿಗಳು, ಚಲನಚಿತ್ರ ನಟರು, ಜನಪದ ಆಸಕ್ತರೆಲ್ಲರೂ ಭಾಗವಹಿಸಲಿದ್ದು, ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರ ಸಹಕಾರ ಕೋರಲಾಗಿದೆ
ಪತ್ರಿಕಾಗೋಷ್ಠಿಯಲ್ಲಿ ಜಾನಪದ ಪರಿಷಿತ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಮೋಹನ್ ದಾಸ ರೈ, ಸಂಚಾಲಕರಾದ ರಾಜೇಶ್ ಆಳ್ವ, ಕಾರ್ಯದರ್ಶಿಗಳಾದ ರಾಜೇಶ್ ಸ್ಕೈಲಾರ್ಕ್, ತಾರಾನಾಥ ಶೆಟ್ಟಿ ಬೋಳಾರ, ಚಂಚಲ ತೇಜೋಮಯ, ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

2 hours ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

8 hours ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

8 hours ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago