ನಿನ್ನೆ ಶಾಲೆಗೆಂದು ಹೋಗಿ ತದನಂತರ ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಅಣೆಕಟ್ಟಿನ ರೈಲ್ವೆ ಸೇತುವೆ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ.
ಮೃತ ಮಕ್ಕಳನ್ನು ಯಶ್ಚಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ್ ಅವರ ಪುತ್ರ ರಾಘವೇಂದ್ರ(15), ವಿಶ್ವನಾಥ್ ಅವರ ಪುತ್ರ ನಿರೂಪ(15), ದೇವದಾಸ್ ಅವರ ಮಗ ಅನ್ವಿತ್(15) ಎಂದು ಗುರುತಿಸಲಾಗಿದೆ.
ಈ ನಾಲ್ವರು ವಿದ್ಯಾರ್ಥಿಗಳು ಖಾಸಗಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದ ಬಳಿಕ 1:30ರ ನಂತರ ನಾಪತ್ತೆಯಾಗಿದ್ದರು.
ನಾಪತ್ತೆ ಪ್ರ ಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ಕ ಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾ ವಳಿಗಳನ್ನು ತರಿಸಿಕೊಂಡಿದ್ದರು. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿದ್ದರು. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥ ಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ನಗರದ ವೆನ್ ಲಾಕ್ ಆಸ್ಪತ್ರೆ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…