ನಿನ್ನೆ ಶಾಲೆಗೆಂದು ಹೋಗಿ ತದನಂತರ ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಅಣೆಕಟ್ಟಿನ ರೈಲ್ವೆ ಸೇತುವೆ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ.
ಮೃತ ಮಕ್ಕಳನ್ನು ಯಶ್ಚಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ್ ಅವರ ಪುತ್ರ ರಾಘವೇಂದ್ರ(15), ವಿಶ್ವನಾಥ್ ಅವರ ಪುತ್ರ ನಿರೂಪ(15), ದೇವದಾಸ್ ಅವರ ಮಗ ಅನ್ವಿತ್(15) ಎಂದು ಗುರುತಿಸಲಾಗಿದೆ.
ಈ ನಾಲ್ವರು ವಿದ್ಯಾರ್ಥಿಗಳು ಖಾಸಗಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದ ಬಳಿಕ 1:30ರ ನಂತರ ನಾಪತ್ತೆಯಾಗಿದ್ದರು.
ನಾಪತ್ತೆ ಪ್ರ ಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ಕ ಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾ ವಳಿಗಳನ್ನು ತರಿಸಿಕೊಂಡಿದ್ದರು. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿದ್ದರು. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥ ಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ನಗರದ ವೆನ್ ಲಾಕ್ ಆಸ್ಪತ್ರೆ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…