ನಿನ್ನೆ ಶಾಲೆಗೆಂದು ಹೋಗಿ ತದನಂತರ ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಅಣೆಕಟ್ಟಿನ ರೈಲ್ವೆ ಸೇತುವೆ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ.
ಮೃತ ಮಕ್ಕಳನ್ನು ಯಶ್ಚಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ್ ಅವರ ಪುತ್ರ ರಾಘವೇಂದ್ರ(15), ವಿಶ್ವನಾಥ್ ಅವರ ಪುತ್ರ ನಿರೂಪ(15), ದೇವದಾಸ್ ಅವರ ಮಗ ಅನ್ವಿತ್(15) ಎಂದು ಗುರುತಿಸಲಾಗಿದೆ.
ಈ ನಾಲ್ವರು ವಿದ್ಯಾರ್ಥಿಗಳು ಖಾಸಗಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದ ಬಳಿಕ 1:30ರ ನಂತರ ನಾಪತ್ತೆಯಾಗಿದ್ದರು.
ನಾಪತ್ತೆ ಪ್ರ ಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ಕ ಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾ ವಳಿಗಳನ್ನು ತರಿಸಿಕೊಂಡಿದ್ದರು. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿದ್ದರು. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥ ಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ನಗರದ ವೆನ್ ಲಾಕ್ ಆಸ್ಪತ್ರೆ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…