ಜನ ಮನದ ನಾಡಿ ಮಿಡಿತ

Advertisement

25 ಮಂದಿಯ ತಂಡದಿಂದ ಮೀನುಗಾರಿಕಾ ಬೋಟ್ ಅಪಹರಣ

ಮಲ್ಪೆ: 25 ಮಂದಿಯ ತಂಡದಿಂದ ಮೀನುಗಾರಿಕಾ ಬೋಟ್ ಅಪಹರಣ: ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಸುಲಿಗೆ


ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ಬೋಟ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಅನ್ನು ಅಪರಿಚಿತ 25 ಮಂದಿಯ ತಂಡವೊಂದು ಸುಲಿಗೆ ಮಾಡಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣನಂದನ ಎಂಬ ಲೈಲಾನ್‌ ಬೋಟ್‌ ನಲ್ಲಿ ಫೆ. 19ರಂದು ನಾಗರಾಜ್‌ ಹರಿಕಾಂತ, ನಾಗರಾಜ್‌ ಹೆಚ್.‌ ಹರಿಕಾಂತ, ಅರುಣ್‌ ಹರಿಕಾಂತ ಅಂಕೋಲ, ಅಶೋಕ ಕುಮುಟ, ಕಾರ್ತಿಕ್‌ ಹರಿಕಾಂತ ಮಂಕಿ, ಚಂದ್ರಕಾಂತ ಹರಿಕಾಂತ ಉಪ್ಪುಂದ, ಸುಬ್ರಮಣ್ಯ ಖಾರ್ವಿ ಅವರು ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಫೆ. 27ರಂದು ಮೀನುಗಾರಿಕೆ ಮುಗಿಸಿಕೊಂಡು ಮಲ್ಪೆ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಬೋಟ್ ಫ್ಯಾನ್‌ ಗೆ ಬಲೆ ಸಿಲುಕಿಕೊಂಡ ಕಾರಣ ಬೋಟ್‌ ಬಂದ್‌ ಆಗಿ ನಿಂತಿತ್ತು. ಈ ಸಂದರ್ಭದಲ್ಲಿ ಸುಮಾರು 25 ಮಂದಿಯ ತಂಡವೊಂದು ಏಕಾಏಕಿ ದಾಳಿ ಮಾಡಿ ಬೋಟ್ ಅನ್ನು ತೀರಕ್ಕೆ ಎಳೆದುಕೊಂಡು ಹೋಗಿದ್ದಾರೆ. ಬಳಿಕ ಬೋಟ್ ನಲ್ಲಿದ್ದ ಮೀನುಗಾರರನ್ನು ಅಪಹರಿಸಿ, ಸುಮಾರು 8 ಲಕ್ಷ ಮೌಲ್ಯದ ಮೀನು ಹಾಗೂ ಬೋಟ್‌ ಗೆ ತುಂಬಿಸಿದ 5,76,700 ರೂ. ಮೌಲ್ಯದ 7,500 ಲೀಟರ್‌ ಡೀಸೆಲ್‌ ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಚೇತನ್‌ ಸಾಲಿಯಾನ್‌ ಅವರು ನೀಡಿರುವ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!