ಮಲ್ಪೆ: 25 ಮಂದಿಯ ತಂಡದಿಂದ ಮೀನುಗಾರಿಕಾ ಬೋಟ್ ಅಪಹರಣ: ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಸುಲಿಗೆ
ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ಬೋಟ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಅನ್ನು ಅಪರಿಚಿತ 25 ಮಂದಿಯ ತಂಡವೊಂದು ಸುಲಿಗೆ ಮಾಡಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣನಂದನ ಎಂಬ ಲೈಲಾನ್ ಬೋಟ್ ನಲ್ಲಿ ಫೆ. 19ರಂದು ನಾಗರಾಜ್ ಹರಿಕಾಂತ, ನಾಗರಾಜ್ ಹೆಚ್. ಹರಿಕಾಂತ, ಅರುಣ್ ಹರಿಕಾಂತ ಅಂಕೋಲ, ಅಶೋಕ ಕುಮುಟ, ಕಾರ್ತಿಕ್ ಹರಿಕಾಂತ ಮಂಕಿ, ಚಂದ್ರಕಾಂತ ಹರಿಕಾಂತ ಉಪ್ಪುಂದ, ಸುಬ್ರಮಣ್ಯ ಖಾರ್ವಿ ಅವರು ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಫೆ. 27ರಂದು ಮೀನುಗಾರಿಕೆ ಮುಗಿಸಿಕೊಂಡು ಮಲ್ಪೆ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಬೋಟ್ ಫ್ಯಾನ್ ಗೆ ಬಲೆ ಸಿಲುಕಿಕೊಂಡ ಕಾರಣ ಬೋಟ್ ಬಂದ್ ಆಗಿ ನಿಂತಿತ್ತು. ಈ ಸಂದರ್ಭದಲ್ಲಿ ಸುಮಾರು 25 ಮಂದಿಯ ತಂಡವೊಂದು ಏಕಾಏಕಿ ದಾಳಿ ಮಾಡಿ ಬೋಟ್ ಅನ್ನು ತೀರಕ್ಕೆ ಎಳೆದುಕೊಂಡು ಹೋಗಿದ್ದಾರೆ. ಬಳಿಕ ಬೋಟ್ ನಲ್ಲಿದ್ದ ಮೀನುಗಾರರನ್ನು ಅಪಹರಿಸಿ, ಸುಮಾರು 8 ಲಕ್ಷ ಮೌಲ್ಯದ ಮೀನು ಹಾಗೂ ಬೋಟ್ ಗೆ ತುಂಬಿಸಿದ 5,76,700 ರೂ. ಮೌಲ್ಯದ 7,500 ಲೀಟರ್ ಡೀಸೆಲ್ ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಚೇತನ್ ಸಾಲಿಯಾನ್ ಅವರು ನೀಡಿರುವ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…