ಕಾರು ಅಪಘಾತ ಸಂಭವಿಸಿದ ಪ್ರಕರಣದಲ್ಲಿ ಕಾರು ಚಾಲಕ ತಂದೆಯ ಮೇಲೆ ಮಗ ದೂರು ನೀಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬಂದಾರು ನರಮಜೆ ನಿವಾಸಿ ಹನೀಫ್ ಎಂಬವರು ಆತನ ತಂದೆಯಾದ ಹಮೀದ್ ಎಂಬವರ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಘಟನೆಯ ವಿವರ:
ಹಮೀದ್ ಅವರು ಬೆಳ್ತಂಗಡಿಯಿಂದ ಉಳ್ಳಾಲ ದರ್ಗಾಕ್ಕೆ ಹೋಗುವರಿದ್ದು, ಕಾರಿನಲ್ಲಿ ಪತ್ನಿ ಜಮೀಳಾ, ಮಕ್ಕಳಾದ ಮೊಹಮ್ಮದ್ ಅನಿಝ್, ಹಮೀದ್, ಅಜ್ಮಿಯಾ ಹಾಗೂ ಮಗಳ ಮಗ ಮೊಹಮ್ಮದ್ ಝಯಾನ್ಅವರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಸಜೀಪ ನಡು ಗ್ರಾಮದ ಕೋಟೆ ಕಣಿ ಎಂಬಲ್ಲಿ ಕಾರು ಸ್ಕಿಡ್ ಆಗಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ . ಘಟನೆಯಿಂದ ಕಾರಿನಲ್ಲಿದ್ದ ಎಲ್ಲರಿಗೂ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಹಮೀದ್ ಅವರು ಕಾರನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಕಾರಣ ಕಾರು ಗುಂಡಿಗೆ ಬಿದ್ದಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…