ಹಳೆಯಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಲಕ್ಷ್ಮಣ್ ಸಾಲ್ಯಾನ್ ಕೆರೆಕಾಡು,ಕಾರ್ಯದರ್ಶಿಯಾಗಿ ಜೀವನ್ ಶೆಟ್ಟಿ ಅಂಗರಗುಡ್ಡೆ ಆಯ್ಕೆ ಮೂಲ್ಕಿ ಮೂಡಬಿದಿರೆ ಭಾರತೀಯ ಜನತಾ ಪಕ್ಷದ ಹಳೆಯಂಗಡಿ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಲಕ್ಷ್ಮಣ್ ಸಾಲ್ಯಾನ್ ಕೆರೆಕಾಡು ಹಾಗೂ ಕಾರ್ಯದರ್ಶಿಯಾಗಿ ಯುವನಾಯಕ ಜೀವನ್ ಶೆಟ್ಟಿ ಅಂಗಾರಗುಡ್ಡೆ ಆಯ್ಕೆಯಾಗಿದ್ದಾರೆ ಎಂದು ಮಂಡಲದ ಅಧ್ಯಕ್ಷ ದಿನೇಶ್ ಪುತ್ರನ್ ಪ್ರಕಟಿಸಿದ್ದಾರೆ.
ಕೆರೆಕಾಡು ಬೆಳ್ಳಾಯರು ನಿವಾಸಿ ಲಕ್ಷ್ಮಣ್ ಸಾಲ್ಯಾನ್ ಅವರು ಈಗಾಗಲೇ ಬೆಳ್ಳಾಯರು ಶಕ್ತಿ ಕೇಂದ್ರದ ಪ್ರಮುಖರಾಗಿ ಸಾಕಷ್ಟು ಅನುಭವ ಹೊಂದಿದ್ದು,ಸ್ಧಳೀಯ ಸಾರ್ವಜನಿಕ ಹಿಂದೂ ರುದ್ರಭೂಮಿಯ ಅಧ್ಯಕ್ಷರಾಗಿ ರುದ್ರಭೂಮಿಯ ಪ್ರಗತಿಗೆ ಶ್ರಮಿಸುತ್ತಿದ್ದಾರೆ.
ಎಲ್ ಐಸಿ ಏಜೆಂಟರಾಗಿ ಮೂಲ್ಕಿ ಯೂನಿಯನ್ ಅಧ್ಯಕ್ಷರಾಗಿಯೂ ಸಂಘಟನಾತ್ಮಕವಾಗಿ ತೊಡಗಿಸಿಕೊಂಡಿದ್ದು,ಕಿನ್ನಿಗೋಳಿ ಪರಿಸರದಲ್ಲಿ ಕೋಳಿ ಮಾರಟದ ಉದ್ಯಮಿಯಾಗಿರುವ ಅವರಿಗೆ ಈ ನೂತನ ಜವಬ್ಧಾರಿಯನ್ನು ಬಿಜೆಪಿ ಕಾರ್ಯಕರ್ತರು ಮುಕ್ತವಾಗಿ ಸ್ವಾಗತಿಸಿದ್ದಾರೆ ಹಾಗೇ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ ಜೀವನ್ ಶೆಟ್ಟಿ ತಮ್ಮ ಅವಧಿಯಲ್ಲಿ ಗ್ರಾಮದ ಸಮಸ್ಯೆಗಳ ಪರಿಹಾರಕ್ಕೆ ಪ್ರಮಾಣಿಕವಾಗಿ ದುಡಿದಿದ್ದು.ತುಳು ಲಿಪಿಯಲ್ಲಿ ನಾಮಫಲಕವನ್ನು ಅಳವಡಿಸಿ ಎಲ್ಲರ ಗಮನ ಸೆಳೆದಿದ್ದರು.ಬಡ ಮಹಿಳೆಗೆ ಸೂರು ನಿರ್ಮಿಸಿ ಕೊಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಅವರು ಸಾಮಾಜಿಕ ಕ್ಷೇತ್ರದಲ್ಲಿ ಸ್ನೇಹಿತರ ಮೂಲಕ ಬಡವರಿಗೆ ನೆರವು ನೀಡುವಲ್ಲಿ ಮುಂಚೂಣಿಯಲ್ಲಿದ್ದಾರೆ.ದಿ ಸುಖಾನಂದ ಶೆಟ್ಟಿ ಸ್ಮರಣಾರ್ಧ ಕ್ರೀಡಾ ಸಂಘಟನೆ,ಸಮಾಜಸೇವೆ ಹಾಗೂ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿ ಸಮಾಜಕ್ಕೆ ಅರ್ಪಿಸಿದ್ದಾರೆ.ಅವರ ಸಂಘಟನಾ ಚತುರತೆಗೆ ಅರ್ಹವಾಗಿಯೇ ಕಾರ್ಯದರ್ಶಿ ಹುದ್ದೆ ದೊರಕಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರಶಂಸಿದ್ದಾರೆ
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…