ಹಳೆಯಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಲಕ್ಷ್ಮಣ್ ಸಾಲ್ಯಾನ್ ಕೆರೆಕಾಡು,ಕಾರ್ಯದರ್ಶಿಯಾಗಿ ಜೀವನ್ ಶೆಟ್ಟಿ ಅಂಗರಗುಡ್ಡೆ ಆಯ್ಕೆ ಮೂಲ್ಕಿ ಮೂಡಬಿದಿರೆ ಭಾರತೀಯ ಜನತಾ ಪಕ್ಷದ ಹಳೆಯಂಗಡಿ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಲಕ್ಷ್ಮಣ್ ಸಾಲ್ಯಾನ್ ಕೆರೆಕಾಡು ಹಾಗೂ ಕಾರ್ಯದರ್ಶಿಯಾಗಿ ಯುವನಾಯಕ ಜೀವನ್ ಶೆಟ್ಟಿ ಅಂಗಾರಗುಡ್ಡೆ ಆಯ್ಕೆಯಾಗಿದ್ದಾರೆ ಎಂದು ಮಂಡಲದ ಅಧ್ಯಕ್ಷ ದಿನೇಶ್ ಪುತ್ರನ್ ಪ್ರಕಟಿಸಿದ್ದಾರೆ.
ಕೆರೆಕಾಡು ಬೆಳ್ಳಾಯರು ನಿವಾಸಿ ಲಕ್ಷ್ಮಣ್ ಸಾಲ್ಯಾನ್ ಅವರು ಈಗಾಗಲೇ ಬೆಳ್ಳಾಯರು ಶಕ್ತಿ ಕೇಂದ್ರದ ಪ್ರಮುಖರಾಗಿ ಸಾಕಷ್ಟು ಅನುಭವ ಹೊಂದಿದ್ದು,ಸ್ಧಳೀಯ ಸಾರ್ವಜನಿಕ ಹಿಂದೂ ರುದ್ರಭೂಮಿಯ ಅಧ್ಯಕ್ಷರಾಗಿ ರುದ್ರಭೂಮಿಯ ಪ್ರಗತಿಗೆ ಶ್ರಮಿಸುತ್ತಿದ್ದಾರೆ.
ಎಲ್ ಐಸಿ ಏಜೆಂಟರಾಗಿ ಮೂಲ್ಕಿ ಯೂನಿಯನ್ ಅಧ್ಯಕ್ಷರಾಗಿಯೂ ಸಂಘಟನಾತ್ಮಕವಾಗಿ ತೊಡಗಿಸಿಕೊಂಡಿದ್ದು,ಕಿನ್ನಿಗೋಳಿ ಪರಿಸರದಲ್ಲಿ ಕೋಳಿ ಮಾರಟದ ಉದ್ಯಮಿಯಾಗಿರುವ ಅವರಿಗೆ ಈ ನೂತನ ಜವಬ್ಧಾರಿಯನ್ನು ಬಿಜೆಪಿ ಕಾರ್ಯಕರ್ತರು ಮುಕ್ತವಾಗಿ ಸ್ವಾಗತಿಸಿದ್ದಾರೆ ಹಾಗೇ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ ಜೀವನ್ ಶೆಟ್ಟಿ ತಮ್ಮ ಅವಧಿಯಲ್ಲಿ ಗ್ರಾಮದ ಸಮಸ್ಯೆಗಳ ಪರಿಹಾರಕ್ಕೆ ಪ್ರಮಾಣಿಕವಾಗಿ ದುಡಿದಿದ್ದು.ತುಳು ಲಿಪಿಯಲ್ಲಿ ನಾಮಫಲಕವನ್ನು ಅಳವಡಿಸಿ ಎಲ್ಲರ ಗಮನ ಸೆಳೆದಿದ್ದರು.ಬಡ ಮಹಿಳೆಗೆ ಸೂರು ನಿರ್ಮಿಸಿ ಕೊಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಅವರು ಸಾಮಾಜಿಕ ಕ್ಷೇತ್ರದಲ್ಲಿ ಸ್ನೇಹಿತರ ಮೂಲಕ ಬಡವರಿಗೆ ನೆರವು ನೀಡುವಲ್ಲಿ ಮುಂಚೂಣಿಯಲ್ಲಿದ್ದಾರೆ.ದಿ ಸುಖಾನಂದ ಶೆಟ್ಟಿ ಸ್ಮರಣಾರ್ಧ ಕ್ರೀಡಾ ಸಂಘಟನೆ,ಸಮಾಜಸೇವೆ ಹಾಗೂ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿ ಸಮಾಜಕ್ಕೆ ಅರ್ಪಿಸಿದ್ದಾರೆ.ಅವರ ಸಂಘಟನಾ ಚತುರತೆಗೆ ಅರ್ಹವಾಗಿಯೇ ಕಾರ್ಯದರ್ಶಿ ಹುದ್ದೆ ದೊರಕಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರಶಂಸಿದ್ದಾರೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…