ಕಡಬ : ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ.
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(೨೦ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶ್ರೀಜಿಸ್ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ, ಅಂಗನವಾಡಿ ಕಾರ್ಯಕರ್ತೆಯೂ ಆಗಿರುವ ಯಮುನಾಕೇಶವ ಗಾಂಧಿಪೇಟೆ ಅವರ ಮನೆಗೆ ಬಂದು ರಾತ್ರಿ ಅಲ್ಲಿಂದ ಆಲಂಕಾರು ಸಮೀಪದ ನೆಕ್ಕರೆಯಲ್ಲಿರುವ ಪೆಟ್ರೋಲ್ ಪಂಪ್ನಲ್ಲಿ ಬೈಕ್ಗೆ ಪೆಟ್ರೋಲ್ ತುಂಬಿಸಿ ಮತ್ತೆ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್(ಜೀತ್) ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್ರನ್ನು ತಕ್ಷಣ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ. ಮೃತ ಶ್ರೀಜಿಸ್ರವರು ತಂದೆ ಗುರುವಪ್ಪ, ತಾಯಿ ಗಿರಿಜಾ, ಸಹೋದರರಾದ ಸುನೀಶ್ ಹಾಗೂ ಸುಜಿಸ್ರವರನ್ನು ಅಗಲಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…