ಕಡಬ :ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ 10 ಲಕ್ಷ ರೂ.ಪರಿಹಾರ ಮತ್ತು ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕೆಂದು ಆಗ್ರಹಿಸಿತು.
ಕಡಬ ತಾಲೂಕು ಆಡಳಿತ ಸೌಧಕ್ಕೆ ಮಂಗಳ ವಾರ ಭೇಟಿ ನೀಡಿದ ಬಿಜೆಪಿ ಯುವ ಮೋರ್ಚಾ ಪ್ರಮುಖರ ನಿಯೋಗವು ತಹಸೀಲ್ದಾರ್ ಕಚೇರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು. ಸುಳ್ಯ ಶಾಸಕಿ ಭಾಗೀರಥಿ
ಮುರುಳ್ಯ,ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪೂರ್ವಾಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾವ್ಯದರ್ಶಿ ಪ್ರದೀಪ್ ಕಲ್ಲರಮೂಲೆ, ಪ್ರಮುಖ ರಾದ ಹರ್ಷಿತ್ ಪೆರುವಾಜೆ, ಮನುದೇವ್ ಪರಮಲೆ, ದುರ್ಗೇಶ್ ಪಾರೆಪ್ಪಡಿ, ಬಿಜೆಪಿ ಪ್ರಮುಖರು, ಮತ್ತಿತರರು ಉಪಸ್ಥಿತರಿದ್ದರು. ಕಡಬ ಉಪ ತಹಸೀಲ್ದಾರ್ ಕೆ.ಟಿ. ಮನೋಹರ್ ಅವರು ಮನವಿ ಸ್ವೀಕರಿಸಿದರು. ಬಳಿಕ ಕಡಬ ಠಾಣೆಗೆ ತೆರಳಿದ ನಿಯೋಗವು ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ಕಡಬ ಎಸ್ಐ ಅಭಿನಂದನ್ ಎಂ.ಎಸ್. ಮನವಿ ಸ್ವೀಕರಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…