ಕಡಬ :ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ 10 ಲಕ್ಷ ರೂ.ಪರಿಹಾರ ಮತ್ತು ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕೆಂದು ಆಗ್ರಹಿಸಿತು.
ಕಡಬ ತಾಲೂಕು ಆಡಳಿತ ಸೌಧಕ್ಕೆ ಮಂಗಳ ವಾರ ಭೇಟಿ ನೀಡಿದ ಬಿಜೆಪಿ ಯುವ ಮೋರ್ಚಾ ಪ್ರಮುಖರ ನಿಯೋಗವು ತಹಸೀಲ್ದಾರ್ ಕಚೇರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು. ಸುಳ್ಯ ಶಾಸಕಿ ಭಾಗೀರಥಿ
ಮುರುಳ್ಯ,ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪೂರ್ವಾಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾವ್ಯದರ್ಶಿ ಪ್ರದೀಪ್ ಕಲ್ಲರಮೂಲೆ, ಪ್ರಮುಖ ರಾದ ಹರ್ಷಿತ್ ಪೆರುವಾಜೆ, ಮನುದೇವ್ ಪರಮಲೆ, ದುರ್ಗೇಶ್ ಪಾರೆಪ್ಪಡಿ, ಬಿಜೆಪಿ ಪ್ರಮುಖರು, ಮತ್ತಿತರರು ಉಪಸ್ಥಿತರಿದ್ದರು. ಕಡಬ ಉಪ ತಹಸೀಲ್ದಾರ್ ಕೆ.ಟಿ. ಮನೋಹರ್ ಅವರು ಮನವಿ ಸ್ವೀಕರಿಸಿದರು. ಬಳಿಕ ಕಡಬ ಠಾಣೆಗೆ ತೆರಳಿದ ನಿಯೋಗವು ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ಕಡಬ ಎಸ್ಐ ಅಭಿನಂದನ್ ಎಂ.ಎಸ್. ಮನವಿ ಸ್ವೀಕರಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…