ಕಡಬ :ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ 10 ಲಕ್ಷ ರೂ.ಪರಿಹಾರ ಮತ್ತು ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕೆಂದು ಆಗ್ರಹಿಸಿತು.
ಕಡಬ ತಾಲೂಕು ಆಡಳಿತ ಸೌಧಕ್ಕೆ ಮಂಗಳ ವಾರ ಭೇಟಿ ನೀಡಿದ ಬಿಜೆಪಿ ಯುವ ಮೋರ್ಚಾ ಪ್ರಮುಖರ ನಿಯೋಗವು ತಹಸೀಲ್ದಾರ್ ಕಚೇರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು. ಸುಳ್ಯ ಶಾಸಕಿ ಭಾಗೀರಥಿ
ಮುರುಳ್ಯ,ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪೂರ್ವಾಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾವ್ಯದರ್ಶಿ ಪ್ರದೀಪ್ ಕಲ್ಲರಮೂಲೆ, ಪ್ರಮುಖ ರಾದ ಹರ್ಷಿತ್ ಪೆರುವಾಜೆ, ಮನುದೇವ್ ಪರಮಲೆ, ದುರ್ಗೇಶ್ ಪಾರೆಪ್ಪಡಿ, ಬಿಜೆಪಿ ಪ್ರಮುಖರು, ಮತ್ತಿತರರು ಉಪಸ್ಥಿತರಿದ್ದರು. ಕಡಬ ಉಪ ತಹಸೀಲ್ದಾರ್ ಕೆ.ಟಿ. ಮನೋಹರ್ ಅವರು ಮನವಿ ಸ್ವೀಕರಿಸಿದರು. ಬಳಿಕ ಕಡಬ ಠಾಣೆಗೆ ತೆರಳಿದ ನಿಯೋಗವು ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ಕಡಬ ಎಸ್ಐ ಅಭಿನಂದನ್ ಎಂ.ಎಸ್. ಮನವಿ ಸ್ವೀಕರಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…