ಬಂಟ್ವಾಳ: ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ ಶಂಕರ ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಸೋಮವಾರ ಅಸು ನೀಗಿದೆ.
ಬಸವ ಶಂಕರ ಕಳೆದ 14ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ. ಒಂದು ವರ್ಷ ಪ್ರಾಯದ ಬಸವನನ್ನು ದೇವರಿಗೆ ಹರಕೆ ರೂಪದಲ್ಲಿ ಒಪ್ಪಿಸಲಾಗಿತ್ತು. ಶಿವ ಕ್ಷೇತ್ರವಾದುದರಿಂದ ಶಂಕರ ಎಂದು ನಾಮಕರಣ ಮಾಡಲಾಗಿತ್ತು. ಸೌಮ್ಯ ಸ್ವಭಾವದ ಶಂಕರ ತನ್ನ ಗಾಂಭೀರ್ಯದಿಂದ ಜಾತ್ರೆ ಸಂದರ್ಭದಲ್ಲಿ ಆಕರ್ಷಣೆಯ ಕೇಂದ್ರವಾಗಿದ್ದ. ಜಾತ್ರೆ ಸಮಯದಲ್ಲಿ ಪ್ರತೀವರ್ಷ ಶಂಕರನಿಗೆ ರಾಜ ಪೋಶಾಕನ್ನು ಕಾವಳಕಟ್ಟೆಯ ದಿನೇಶ್ ಟೈಲರ್ ಅವರು ಸಿದ್ಧಪಡಿಸುತ್ತಿದ್ದರು. ಈ ಬಾರಿಯೂ ಹೊಸ ವಸ್ತ್ರ ತಯಾರಾಗಿತ್ತು. ಕೆಲವು ದಿನಗಳ ಹಿಂದೆ ಶಂಕರನನ್ನು ಆರೈಕೆಗಾಗಿ ಕೆದ್ದಳಿಕೆಗೆ ಕೊಂಡೊಯ್ಯಲಾಗಿತ್ತು. ಶಿವರಾತ್ರಿ ಜಾತ್ರೆಗೆ ಕೆಲವೇ ದಿನಗಳಿರುವಾಗ ಶಂಕರ ಮೃತಪಟ್ಟಿದ್ದು ಗ್ರಾಮಸ್ಥರಿಗೆ ದು:ಖವನ್ನುಂಟುಮಾಡಿದೆ. ಬಸವ ಶಂಕರನ ಅಂತಿಮ ಸಂಸ್ಕಾರವನ್ನು ಕೆದ್ದಳಿಕೆಯಲ್ಲಿ ನೆರವೇರಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…