ದಕ್ಷಿಣ ಕನ್ನಡ : ಕಳೆದ ಕೆಲವಾರು ವರ್ಷಗಳಿಂದ,ಹಲವು ಸದಸ್ಯರನ್ನು ಒಳಗೊಂಡ, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ, ಪದ್ಮಶ್ರೀ ಭಟ್ ಇವರ ಉಸ್ತುವಾರಿಯ, ಬಡ ಅನಾರೋಗ್ಯ ಪೀಡಿತರ ಸೇವೆಯು ಒಳಗೊಂಡಂತೆ ಸದಾ ಸಮಾಜ ಸೇವೆಯನ್ನು ಮಾಡುತ್ತಿರುವ ಕರಾವಳಿ ಕರ್ನಾಟಕದ ನಮ್ಮ ಹೆಮ್ಮೆಯ “ವಾಯ್ಸ್ ಆಫ್ ಆರಾಧನಾ- ಆರದಿರಲಿ ಬದುಕು” ತಂಡವು ಇದೀಗ ಫೆಬ್ರವರಿ 2024ರ ತಿಂಗಳ ಸಹಾಯ ಹಸ್ತವನ್ನು ಇಂದು ದ.ಕ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಗಾಂಧೀ ನಗರ ಕಡೆಪಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ತಾಯಿ ಬಬಿತ ಜೊತೆ ಇಬ್ಬರು ಮಕ್ಕಳು ವಾಸವಾಗಿರುವ ಕಡುಬಡತನದ 12 ವರ್ಷದ ಸಿಂಚನಾ ಮಗು ನರಗಳ ಸಮಸ್ಯೆ ಬ್ರೈನ್ ಹಾಗು ಮೂತ್ರ ಕೋಶದ ಸಮಸ್ಯೆ ಯಿಂದ ಬಳಲುತ್ತಿದ್ದು ಅವರ ಕಷ್ಟ ಅರಿತು ತಂಡ ಸಿಂಚನಾ ಮಗುವಿನ ಚಿಕಿತ್ಸೆಗಾಗಿ ತನ್ನ ತಂಡದ ಸದಸ್ಯರಿಂದ ಸಂಗ್ರಹಿಸಲಾದ 35 ಸಾವಿರ ರೂಪಾಯಿ ಸಹಾಯ ಹಸ್ತ ವನ್ನು ಪ್ರೀತಿಪೂರ್ವಕವಾಗಿ ನೀಡಿದರು.
ಜನಸೇವೆಯೇ ಜನಾರ್ದನ ಸೇವೆ ಎಂಬ ತತ್ವದಡಿ ಅನಾರೋಗ್ಯ ಪೀಡಿತರಿಗೆ ಸಹಾಯಧನ, ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಅವಕಾಶ, ಸಾಂಸ್ಕೃತಿಕ ಸಂಭ್ರಮ, ಜಾನಪದ ಕಾರ್ಯಕ್ರಮಗಳು, ಸರ್ಕಾರಿ ಶಾಲೆಗೆ ಕೊಡುಗೆ ಯೋಜನೆ, ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಈ ತಂಡವು ಹಮ್ಮಿಕೊಂಡಿದ್ದು,
ಕರಾವಳಿ ಕರ್ನಾಟಕದ ಮನೆಮತಾಗಿರುವ ತಂಡ, ತನ್ನ ತಂಡದ ಸದಸ್ಯರ ಬಲದಿಂದ ಉತ್ತಮವಾದ ಸಮಾಜ ಸೇವೆಯನ್ನು ಮಾಡುತ್ತಿದ್ದು, ಪದ್ಮಶ್ರೀ ಭಟ್ಟರ ಮಾರ್ಗದರ್ಶನದಲ್ಲಿ ಇನ್ನಷ್ಟು ಸಮಾಜ ಸೇವೆಯಲ್ಲಿ ಸಾಧಿಸಲಿ.
ಸಾರ್ವಜನಿಕ ನಾಗರಿಕರು ವಾಯ್ಸ್ ಆಫ್ ಆರಾಧನಾ ಆರಾಧನೆ ಬದುಕು ತಂಡವನ್ನು ಅಭಿನಂದಿಸಿದ್ದಾರೆ, ಶುಭಾಶಯವನ್ನು ಹೇಳಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…