ಕರಾವಳಿ

ಪಡುಬಿದ್ರಿ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಉಡುಪಿ: ಬ್ಯಾಂಕ್ ಮತ್ತು ಸೊಸೈಟಿಗಳಲ್ಲಿ 30 ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಕುಮುಟಾದ ನಿತಿಲ್ ಭಾಸ್ಕರ್ ಶೇಟ್(35), ಸಂಜಯ್ ಶೇಟ್(42), ಸಂತೋಷ್ ಶೇಟ್(39) ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ(26) ಎಂದು ಗುರುತಿಸಲಾಗಿದೆ.


30 ಗ್ರಾಂ ನಕಲಿ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕ್, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣದಲ್ಲಿ ಬಂಧಿತನಾಗಿರುವ ಪಡುಬಿದ್ರಿ ಕಂಚಿನಡ್ಕ ನಿವಾಸಿ, ಕೇರಳ ಮೂಲದ ಆರೋಪಿ ರಾಜೀವ್ ನೀಡಿರುವ ಮಾಹಿತಿಯಂತೆ ಪೊಲೀಸರು ಇದೀಗ ಈ ನಾಲ್ವರು ಆರೋಪಿಗಳನ್ನು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ ನಕಲಿ 916 ಹಾಲ್ಮಾರ್ಕ್ ಸೀಲ್ ಹಾಕಲು ಬಳಸಲಾಗುತ್ತಿದ್ದ ಸುಮಾರು 3.5 ಲಕ್ಷ ರೂ. ಮೌಲ್ಯದ ಮೆಷಿನ್, ಕಂಪ್ಯೂಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


92 ಶೇ. ಚಿನ್ನಾಭರಣಗಳಂತೆಯೇ ಸಾಚಾ ಚಿನ್ನ ಇದೆಂದು ನಂಬಿದ ಬ್ಯಾಂಕು, ಸೊಸೈಟಿಗಳು ಚಿನ್ನಾಭರಣ ಈಡಿನ ಸಾಲವನ್ನಿತ್ತು ಮರಳಿ ಬಾರದೇ ಇದ್ದಾಗ ಏಲಂ ಪ್ರಕ್ರಿಯೆ ನಡೆಸಿ ಇದರಲ್ಲೂ ನಕಲಿ – ಅಸಲಿಗಳನ್ನು ಪತ್ತೆ ಮಾಡಲಾಗಿರಲಿಲ್ಲ. ಉಡುಪಿಯ ಬಿಡ್ಡುದಾರರೊಬ್ಬರು ಇದನ್ನು ಕತ್ತರಿಸಿ ಪರಿಶೀಲಿಸಿದಾಗ ಆರೋಪಿ ರಾಜೀವ್ ಮತ್ತು‌ ಆತನ ಪತ್ನಿಯ ಚಿನ್ನಾಭರಣ ಸಾಲದ ಪ್ರಕರಣವು ಹೊರಬಂದಿತ್ತು. ಪಡುಬಿದ್ರಿಯಲ್ಲಿನ ಇಂಡಸ್ಟ್ರಿಯಲ್ ಬ್ಯಾಂಕ್ ನ ಪಡುಬಿದ್ರಿ ಶಾಖೆಯಲ್ಲಿ 2022ರ ಸೆ. 1ರಿಂದ ಫೆ. 26, 2024ರವರೆಗೆ ಈ ದಂಪತಿ 180ಗ್ರಾಂ ನಕಲಿ ಚಿನ್ನವನ್ನಿಟ್ಟು 8.08ಲಕ್ಷಗಳನ್ನು ಪಡೆದುಕೊಂಡಿದೆ. ಸಹಕಾರಿ ಸಂಘವೊಂದರ ಸಿಟಿ ಶಾಖೆಯಿಂದ ಆರೋಪಿಗಳು ಇದೇ ಸುಮಾರು 2ವರ್ಷಗಳ ಅವಧಿಯಲ್ಲಿ 231 ಗ್ರಾಂ ಹಾಗೂ 188 ಗ್ರಾಂ ನಕಲಿ ಚಿನ್ನವನ್ನು ಅಡವಿಟ್ಟು 19ಲಕ್ಷ ರೂ. ಗಳನ್ನು ಸಾಲವಾಗಿ ಪಡೆದಿದ್ದಾರೆ. ಉಚ್ಚಿಲದ ಸಹಕಾರಿ ಬ್ಯಾಂಕ್ ಶಾಖೆಯೊಂದರಿಂದ ಮಾರ್ಚ್ 2023ರಿಂದ ಫೆ. 26, 2024ರ ಅವಧಿಯಲ್ಲಿ 72ಗ್ರಾಂ ಚಿನ್ನ ಅಡವಿಟ್ಟು 2.86 ಲಕ್ಷ ರೂ. ಗಳ ಸಹಿತ ಒಟ್ಟು 29.94 ಲಕ್ಷ ರೂ. ಗಳನ್ನು ರಾಜೀವ್ ದಂಪತಿ ಪಡೆದಿದ್ದರು. ಆರೋಪಿ ರಾಜೀವ್ ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

16 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

17 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

17 hours ago

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…

21 hours ago

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…

21 hours ago

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…

21 hours ago