ಕುಂಬಳೆ: ಅಂಗಡಿಮೊಗರು ಸಮೀಪದ ಇತಿಹಾಸ ಪ್ರಸಿದ್ಧ ದೇಲಂಪಾಡಿ ಶ್ರೀಮಹಾಲಿಂಗೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಶಿವರಾತ್ರಿ ಮಹೋತ್ಸವದ ಸಂದರ್ಭ ಕೊಡುಗೈ ದಾನಿ,ಉದ್ಯಮಿ ,ಸಮಾಜ ಸೇವಕ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರನ್ನು ಕ್ಷೇತ್ರ ಸಮಿತಿ ಜತೆಗೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ಸನ್ಮಾನಿಸಿ ಅಭಿನಂದಿಸಿತು.
ಕ್ಷೇತ್ರ ಆಡಳಿತ ಮೊಕ್ತೇಸರ ನ್ಯಾಯವಾದಿ ಬಿ.ಸುಬ್ಬಯ್ಯ ರೈ ಅವರ ಆಧ್ಯಕ್ಷತೆಯಲ್ಲಿ ಜರಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಪುತ್ತಿಗೆ ಗ್ರಾಮ ಪಂಚಾಯತಿಯ ಹಲವಾರು ಸಂಘ ಸಂಸ್ಥೆಯ ಪರವಾಗಿ ಪ್ರಮುಖರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಧರ್ಮಕಾರ್ಯಗಳಿಗೆ ಹಲವೆಡೆ ಸಿಕ್ಕಿದ ಸಂತೋಷದ ಜತೆಗೆ ಇವುಗಳನ್ನು ಗುರುತಿಸುವ ಜನರಿದ್ದಾರೆ ಎನ್ನವುದರಿಂದ ತಾನು ತೃಪ್ತ ಎಂದರು.
ಶಿಕ್ಷಕ ರಾಜರಾಮ ರಾವ್ ಧಾರ್ಮಿಕ ಭಾಷಣಗೈದರು. ದೇಲಂಪಾಡಿ ಕ್ಷೇತ್ರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಿರಿಧರ ಶೆಟ್ಟಿ ಮಂಗಳೂರು,ಪುತ್ತಿಗೆ ಗ್ರಾ. ಪಂ.ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ, ಮಲಬಾರ್ ದೇವಸ್ವಂ ಬೋರ್ಡು ಸದಸ್ಯ ಎಂ. ಶಂಕರ ರೈ ಮಾಸ್ತರ್, ಅಭಿಮತ ಟಿವಿ ವಾಹಿನಿಯ ಜನರಲ್ ಮೆನೆಜರ್ ದಾಮೋದರ ಶೆಟ್ಟಿ ಪಟ್ಲ,ಪುತ್ತಿಗೆ ಗ್ರಾ.ಪಂ.ಸದಸ್ಯೆ ಪ್ರೇಮಾ ಎಸ್.ರೈ ಕೊರತ್ತಿಪಾರೆ ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರ ರಸ್ತೆಯನ್ನು ಮರು ಡಾಮರೀಕರಣಗೊಳಿಸಿ ಅಭಿವೃದ್ಧಿಪಡಿಸಲು ಶ್ರಮಿಸಿದ ಪುತ್ತಿಗೆ ಗ್ರಾ. ಪಂ.ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ,ಸದಸ್ಯೆ ಪ್ರೇಮ ಎನ್ ರೈ ಅವರನ್ನು ಕ್ಷೇತ್ರಾಡಳಿತದ ಪರವಾಗಿ ಸನ್ಮಾನಿಸಲಾಯಿತು. ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಡಿ.ದಾಮೋದರನ್ ಸ್ವಾಗತಿಸಿ ಕಾರ್ಯದರ್ಶಿ ಕೇಶವ ಡಿ ವಂದಿಸಿದರು.ಡಿ.ರಾಜೇಂದ್ರ ರೈ ನಿರೂಪಿಸಿದರು. ಬಳಿಕ ನವಚೇತನ ಯೂತ್ ಕ್ಲಬ್ ಬಾಡೂರು ಇವರಿಂದ “ಕಾಸ್ ದ ಕಸರತ್ತ್” ತುಳು ನಾಟಕ ಪ್ರದರ್ಶನಗೊಂಡಿತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…