ಕುಂಬಳೆ: ಅಂಗಡಿಮೊಗರು ಸಮೀಪದ ಇತಿಹಾಸ ಪ್ರಸಿದ್ಧ ದೇಲಂಪಾಡಿ ಶ್ರೀಮಹಾಲಿಂಗೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಶಿವರಾತ್ರಿ ಮಹೋತ್ಸವದ ಸಂದರ್ಭ ಕೊಡುಗೈ ದಾನಿ,ಉದ್ಯಮಿ ,ಸಮಾಜ ಸೇವಕ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರನ್ನು ಕ್ಷೇತ್ರ ಸಮಿತಿ ಜತೆಗೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ಸನ್ಮಾನಿಸಿ ಅಭಿನಂದಿಸಿತು.
ಕ್ಷೇತ್ರ ಆಡಳಿತ ಮೊಕ್ತೇಸರ ನ್ಯಾಯವಾದಿ ಬಿ.ಸುಬ್ಬಯ್ಯ ರೈ ಅವರ ಆಧ್ಯಕ್ಷತೆಯಲ್ಲಿ ಜರಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಪುತ್ತಿಗೆ ಗ್ರಾಮ ಪಂಚಾಯತಿಯ ಹಲವಾರು ಸಂಘ ಸಂಸ್ಥೆಯ ಪರವಾಗಿ ಪ್ರಮುಖರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಧರ್ಮಕಾರ್ಯಗಳಿಗೆ ಹಲವೆಡೆ ಸಿಕ್ಕಿದ ಸಂತೋಷದ ಜತೆಗೆ ಇವುಗಳನ್ನು ಗುರುತಿಸುವ ಜನರಿದ್ದಾರೆ ಎನ್ನವುದರಿಂದ ತಾನು ತೃಪ್ತ ಎಂದರು.
ಶಿಕ್ಷಕ ರಾಜರಾಮ ರಾವ್ ಧಾರ್ಮಿಕ ಭಾಷಣಗೈದರು. ದೇಲಂಪಾಡಿ ಕ್ಷೇತ್ರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಿರಿಧರ ಶೆಟ್ಟಿ ಮಂಗಳೂರು,ಪುತ್ತಿಗೆ ಗ್ರಾ. ಪಂ.ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ, ಮಲಬಾರ್ ದೇವಸ್ವಂ ಬೋರ್ಡು ಸದಸ್ಯ ಎಂ. ಶಂಕರ ರೈ ಮಾಸ್ತರ್, ಅಭಿಮತ ಟಿವಿ ವಾಹಿನಿಯ ಜನರಲ್ ಮೆನೆಜರ್ ದಾಮೋದರ ಶೆಟ್ಟಿ ಪಟ್ಲ,ಪುತ್ತಿಗೆ ಗ್ರಾ.ಪಂ.ಸದಸ್ಯೆ ಪ್ರೇಮಾ ಎಸ್.ರೈ ಕೊರತ್ತಿಪಾರೆ ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರ ರಸ್ತೆಯನ್ನು ಮರು ಡಾಮರೀಕರಣಗೊಳಿಸಿ ಅಭಿವೃದ್ಧಿಪಡಿಸಲು ಶ್ರಮಿಸಿದ ಪುತ್ತಿಗೆ ಗ್ರಾ. ಪಂ.ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ,ಸದಸ್ಯೆ ಪ್ರೇಮ ಎನ್ ರೈ ಅವರನ್ನು ಕ್ಷೇತ್ರಾಡಳಿತದ ಪರವಾಗಿ ಸನ್ಮಾನಿಸಲಾಯಿತು. ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಡಿ.ದಾಮೋದರನ್ ಸ್ವಾಗತಿಸಿ ಕಾರ್ಯದರ್ಶಿ ಕೇಶವ ಡಿ ವಂದಿಸಿದರು.ಡಿ.ರಾಜೇಂದ್ರ ರೈ ನಿರೂಪಿಸಿದರು. ಬಳಿಕ ನವಚೇತನ ಯೂತ್ ಕ್ಲಬ್ ಬಾಡೂರು ಇವರಿಂದ “ಕಾಸ್ ದ ಕಸರತ್ತ್” ತುಳು ನಾಟಕ ಪ್ರದರ್ಶನಗೊಂಡಿತು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…