ಕುಂಬಳೆ: ಅಂಗಡಿಮೊಗರು ಸಮೀಪದ ಇತಿಹಾಸ ಪ್ರಸಿದ್ಧ ದೇಲಂಪಾಡಿ ಶ್ರೀಮಹಾಲಿಂಗೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಶಿವರಾತ್ರಿ ಮಹೋತ್ಸವದ ಸಂದರ್ಭ ಕೊಡುಗೈ ದಾನಿ,ಉದ್ಯಮಿ ,ಸಮಾಜ ಸೇವಕ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರನ್ನು ಕ್ಷೇತ್ರ ಸಮಿತಿ ಜತೆಗೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ಸನ್ಮಾನಿಸಿ ಅಭಿನಂದಿಸಿತು.
ಕ್ಷೇತ್ರ ಆಡಳಿತ ಮೊಕ್ತೇಸರ ನ್ಯಾಯವಾದಿ ಬಿ.ಸುಬ್ಬಯ್ಯ ರೈ ಅವರ ಆಧ್ಯಕ್ಷತೆಯಲ್ಲಿ ಜರಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಪುತ್ತಿಗೆ ಗ್ರಾಮ ಪಂಚಾಯತಿಯ ಹಲವಾರು ಸಂಘ ಸಂಸ್ಥೆಯ ಪರವಾಗಿ ಪ್ರಮುಖರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಧರ್ಮಕಾರ್ಯಗಳಿಗೆ ಹಲವೆಡೆ ಸಿಕ್ಕಿದ ಸಂತೋಷದ ಜತೆಗೆ ಇವುಗಳನ್ನು ಗುರುತಿಸುವ ಜನರಿದ್ದಾರೆ ಎನ್ನವುದರಿಂದ ತಾನು ತೃಪ್ತ ಎಂದರು.
ಶಿಕ್ಷಕ ರಾಜರಾಮ ರಾವ್ ಧಾರ್ಮಿಕ ಭಾಷಣಗೈದರು. ದೇಲಂಪಾಡಿ ಕ್ಷೇತ್ರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಿರಿಧರ ಶೆಟ್ಟಿ ಮಂಗಳೂರು,ಪುತ್ತಿಗೆ ಗ್ರಾ. ಪಂ.ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ, ಮಲಬಾರ್ ದೇವಸ್ವಂ ಬೋರ್ಡು ಸದಸ್ಯ ಎಂ. ಶಂಕರ ರೈ ಮಾಸ್ತರ್, ಅಭಿಮತ ಟಿವಿ ವಾಹಿನಿಯ ಜನರಲ್ ಮೆನೆಜರ್ ದಾಮೋದರ ಶೆಟ್ಟಿ ಪಟ್ಲ,ಪುತ್ತಿಗೆ ಗ್ರಾ.ಪಂ.ಸದಸ್ಯೆ ಪ್ರೇಮಾ ಎಸ್.ರೈ ಕೊರತ್ತಿಪಾರೆ ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರ ರಸ್ತೆಯನ್ನು ಮರು ಡಾಮರೀಕರಣಗೊಳಿಸಿ ಅಭಿವೃದ್ಧಿಪಡಿಸಲು ಶ್ರಮಿಸಿದ ಪುತ್ತಿಗೆ ಗ್ರಾ. ಪಂ.ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ,ಸದಸ್ಯೆ ಪ್ರೇಮ ಎನ್ ರೈ ಅವರನ್ನು ಕ್ಷೇತ್ರಾಡಳಿತದ ಪರವಾಗಿ ಸನ್ಮಾನಿಸಲಾಯಿತು. ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಡಿ.ದಾಮೋದರನ್ ಸ್ವಾಗತಿಸಿ ಕಾರ್ಯದರ್ಶಿ ಕೇಶವ ಡಿ ವಂದಿಸಿದರು.ಡಿ.ರಾಜೇಂದ್ರ ರೈ ನಿರೂಪಿಸಿದರು. ಬಳಿಕ ನವಚೇತನ ಯೂತ್ ಕ್ಲಬ್ ಬಾಡೂರು ಇವರಿಂದ “ಕಾಸ್ ದ ಕಸರತ್ತ್” ತುಳು ನಾಟಕ ಪ್ರದರ್ಶನಗೊಂಡಿತು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…