ದಕ್ಷಿಣ ಕನ್ನಡ : ಸಮಾಜಸೇವಕಿ, ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು ‘ಶ್ರೀ ಸರ್ವೆ ಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ). 7ನೇ ವಾರ್ಷಿಕೋತ್ಸವದ ಪ್ರಯುಕ್ತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ ‘ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ’ ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಯಾಗಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗ ಮಂದಿರದಲ್ಲಿ ಮಾರ್ಚ್ 24 , 2024 ರಂದು ನಡೆಯಲಿದೆ ಎಂದು ಸಂಸ್ಥೆಯ ರಾಜ್ಯಾಧ್ಯಕ್ಷರಾದ ಲಕ್ಷಿತಾ ಗಂಗಾವತಿ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಡಾ.ಮಾಲತಿ ಶೆಟ್ಟಿ ಮಾಣೂರುರವರು 18 ವರುಷದಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ ಹಾಗೂ ಕಳೆದ 11 ವರುಷದಿಂದ ಸಾಹಿತ್ಯ ಪರ ಪತ್ರಿಕೆಯನ್ನು ನಡೆಸುತ್ತಿದ್ದಾರೆ. 9 ಕೃತಿಗಳನ್ನು ಸಾಹಿತ್ಯಲೋಕಕ್ಕೆ ನೀಡಿದ್ದಾರೆ. ಇತರ ಹಿರಿಯ ಕಿರಿಯ ಸಾಹಿತಿಗಳ 38 ಕೃತಿಗಳನ್ನು ಅಮೃತ ಪ್ರಕಾಶ ಪತ್ರಿಕೆ ಸರಿಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿ ಪತಿ ಸತ್ಯ ಪ್ರಕಾಶ ಶೆಟ್ಟಿ ಜೊತೆ ವಾಸವಾಗಿದ್ದಾರೆ. ಹಲವಾರು ರಾಜ್ಯ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ಪ್ರಸ್ತುತ ಪತ್ರಿಕೆ ಜೊತೆಗೆ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲೆಯ ಮಾಧ್ಯಮ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ..
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…
ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…