ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ಜಿಲ್ಲಾ ಗವರ್ನರ್ ರವರ ಭೇಟಿ ಕೊಡುಗೆಗಳ ಹಸ್ತಾಂತರ

ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ರೋಟರಿ ಜಿಲ್ಲೆ 31 81 ಇದರ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ ಅವರು ಶನಿವಾರ ಅಧಿಕೃತ ಭೇಟಿ ನೀಡಿ ವಿವಿಧ ಕೊಡುಗೆಗಳು ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು.

ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬರಮಾಡಿಕೊಂಡರು. ಅಲ್ಲಿಂದ ಬಳ್ಳಕ್ಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ರೋ. ಮೈಲಪ್ಪ ಸಂಕೇಶ್ ಅವರು ಕೊಡ ಮಾಡಿದ 9 ಅಂಗನವಾಡಿ ಕೇಂದ್ರಗಳಿಗೆ ಅಡುಗೆ ಸ್ಟೌ ಗಳನ್ನ ಉಚಿತವಾಗಿ ವಿತರಣೆ ಮಾಡಲಾಯಿತು. ಮುಂದೆ ಬಳ್ಪ ಎಡೋಣ ಶಿಶುಮಂದಿರಕ್ಕೆ ಭೇಟಿ ನೀಡಿ ಅಲ್ಲಿ ಚಿಕ್ಕ ಮಕ್ಕಳಿಗೆ ಚೇರ್ ಹಾಗೂ ಅಡಿಗೆ ಪರಿಕರಗಳನ್ನು ವಿತರಣೆ ಮಾಡಲಾಯಿತು.

ಅಲ್ಲಿಂದ ಏನೇಕಲ್ಲು ಶಾರದಾ ಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಲಾದ ವರ್ಲಿ ಚಿತ್ರಗಳನ್ನು ಅನಾವರಣ ಮಾಡಲಾಯಿತು. ತದನಂತರ ಏನೇ ಕಲ್ಲು ಬಾನಡ್ಕದಲ್ಲಿ ಡಾ.ರವಿ ಕಕ್ಕೆ ಪದವು ಅವರು ದಾನ ರೂಪದಲ್ಲಿ ಕೊಡ ಮಾಡಿದ ತನ್ನ ಸ್ವಂತ ಜಾಗದಲ್ಲಿ ಫಲಾನುಭವಿಗೆ ಕಟ್ಟಿಕೊಟ್ಟ ಮನೆಯನ್ನ ಹಸ್ತಾಂತರಿಸಲಾಯಿತು. ನಂತರ ಏನೇ ಕಲ್ಲು ಬಸ್ ನಿಲ್ದಾಣದ ಪಕ್ಕ ರೋಟರಿ ಕ್ಲಬ್ ಅಧ್ಯಕ್ಷ ರೋ. ಪ್ರಶಾಂತ ಕೋಡಿಬೈಲ್ ತನ್ನ ಸ್ವಂತ ಖರ್ಚಿಯಲ್ಲಿ ದಾನವಾಗಿ ಕೊಡ ಮಾಡಿದ ಆಟೋರಿಕ್ಷಾ ನಿಲ್ದಾಣ ವನ್ನು ಲೋಕಾರ್ಪಣೆಗೊಳಿಸಲಾಯಿತು.

ಸಂಜೆ ಏನೆಕಲ್ಲು ಡಿ .ಇ. ರಾಯಲ್ ಹೋಟೆಲ್ ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸಾಧನೆಗೇಯ್ದ ಸಾಧಕರುಗಳನ್ನು ಸನ್ಮಾನಿಸಲಾಯಿತು. ಹಾಗೆ ವಿವಿಧ ಕಡೆಗಳಲ್ಲಿ ಕೊಡುಗೆಯಾಗಿ ನೀಡಿದ ರೋಟರಿ ಕ್ಲಬ್ಬಿನ ದಾನಿಗಳನ್ನು ಗೌರವಿಸಲಾಯಿತು. ಈ ಎಲ್ಲಾ ಸಂದರ್ಭಗಳಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ,ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷರು ,ಪದಾಧಿಕಾರಿಗಳು, ಇನ್ನರ್ ವೇಲ್ ಕ್ಲಬ್ಬಿನ ಅಧ್ಯಕ್ಷರು, ಸದಸ್ಯರುಗಳು ,ಹಾಗೂ ರೋಟರಿ ಕ್ಲಬ್ಬಿನ ಎಲ್ಲಾ ಸದಸ್ಯರು ಹಾಜರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!