ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ಜಿಲ್ಲಾ ಗವರ್ನರ್ ರವರ ಭೇಟಿ ಕೊಡುಗೆಗಳ ಹಸ್ತಾಂತರ

ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ರೋಟರಿ ಜಿಲ್ಲೆ 31 81 ಇದರ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ ಅವರು ಶನಿವಾರ ಅಧಿಕೃತ ಭೇಟಿ ನೀಡಿ ವಿವಿಧ ಕೊಡುಗೆಗಳು ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು.

ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬರಮಾಡಿಕೊಂಡರು. ಅಲ್ಲಿಂದ ಬಳ್ಳಕ್ಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ರೋ. ಮೈಲಪ್ಪ ಸಂಕೇಶ್ ಅವರು ಕೊಡ ಮಾಡಿದ 9 ಅಂಗನವಾಡಿ ಕೇಂದ್ರಗಳಿಗೆ ಅಡುಗೆ ಸ್ಟೌ ಗಳನ್ನ ಉಚಿತವಾಗಿ ವಿತರಣೆ ಮಾಡಲಾಯಿತು. ಮುಂದೆ ಬಳ್ಪ ಎಡೋಣ ಶಿಶುಮಂದಿರಕ್ಕೆ ಭೇಟಿ ನೀಡಿ ಅಲ್ಲಿ ಚಿಕ್ಕ ಮಕ್ಕಳಿಗೆ ಚೇರ್ ಹಾಗೂ ಅಡಿಗೆ ಪರಿಕರಗಳನ್ನು ವಿತರಣೆ ಮಾಡಲಾಯಿತು.

ಅಲ್ಲಿಂದ ಏನೇಕಲ್ಲು ಶಾರದಾ ಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಲಾದ ವರ್ಲಿ ಚಿತ್ರಗಳನ್ನು ಅನಾವರಣ ಮಾಡಲಾಯಿತು. ತದನಂತರ ಏನೇ ಕಲ್ಲು ಬಾನಡ್ಕದಲ್ಲಿ ಡಾ.ರವಿ ಕಕ್ಕೆ ಪದವು ಅವರು ದಾನ ರೂಪದಲ್ಲಿ ಕೊಡ ಮಾಡಿದ ತನ್ನ ಸ್ವಂತ ಜಾಗದಲ್ಲಿ ಫಲಾನುಭವಿಗೆ ಕಟ್ಟಿಕೊಟ್ಟ ಮನೆಯನ್ನ ಹಸ್ತಾಂತರಿಸಲಾಯಿತು. ನಂತರ ಏನೇ ಕಲ್ಲು ಬಸ್ ನಿಲ್ದಾಣದ ಪಕ್ಕ ರೋಟರಿ ಕ್ಲಬ್ ಅಧ್ಯಕ್ಷ ರೋ. ಪ್ರಶಾಂತ ಕೋಡಿಬೈಲ್ ತನ್ನ ಸ್ವಂತ ಖರ್ಚಿಯಲ್ಲಿ ದಾನವಾಗಿ ಕೊಡ ಮಾಡಿದ ಆಟೋರಿಕ್ಷಾ ನಿಲ್ದಾಣ ವನ್ನು ಲೋಕಾರ್ಪಣೆಗೊಳಿಸಲಾಯಿತು.

ಸಂಜೆ ಏನೆಕಲ್ಲು ಡಿ .ಇ. ರಾಯಲ್ ಹೋಟೆಲ್ ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸಾಧನೆಗೇಯ್ದ ಸಾಧಕರುಗಳನ್ನು ಸನ್ಮಾನಿಸಲಾಯಿತು. ಹಾಗೆ ವಿವಿಧ ಕಡೆಗಳಲ್ಲಿ ಕೊಡುಗೆಯಾಗಿ ನೀಡಿದ ರೋಟರಿ ಕ್ಲಬ್ಬಿನ ದಾನಿಗಳನ್ನು ಗೌರವಿಸಲಾಯಿತು. ಈ ಎಲ್ಲಾ ಸಂದರ್ಭಗಳಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ,ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷರು ,ಪದಾಧಿಕಾರಿಗಳು, ಇನ್ನರ್ ವೇಲ್ ಕ್ಲಬ್ಬಿನ ಅಧ್ಯಕ್ಷರು, ಸದಸ್ಯರುಗಳು ,ಹಾಗೂ ರೋಟರಿ ಕ್ಲಬ್ಬಿನ ಎಲ್ಲಾ ಸದಸ್ಯರು ಹಾಜರಿದ್ದರು.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!