ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ರೋಟರಿ ಜಿಲ್ಲೆ 31 81 ಇದರ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ ಅವರು ಶನಿವಾರ ಅಧಿಕೃತ ಭೇಟಿ ನೀಡಿ ವಿವಿಧ ಕೊಡುಗೆಗಳು ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು.
ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬರಮಾಡಿಕೊಂಡರು. ಅಲ್ಲಿಂದ ಬಳ್ಳಕ್ಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ರೋ. ಮೈಲಪ್ಪ ಸಂಕೇಶ್ ಅವರು ಕೊಡ ಮಾಡಿದ 9 ಅಂಗನವಾಡಿ ಕೇಂದ್ರಗಳಿಗೆ ಅಡುಗೆ ಸ್ಟೌ ಗಳನ್ನ ಉಚಿತವಾಗಿ ವಿತರಣೆ ಮಾಡಲಾಯಿತು. ಮುಂದೆ ಬಳ್ಪ ಎಡೋಣ ಶಿಶುಮಂದಿರಕ್ಕೆ ಭೇಟಿ ನೀಡಿ ಅಲ್ಲಿ ಚಿಕ್ಕ ಮಕ್ಕಳಿಗೆ ಚೇರ್ ಹಾಗೂ ಅಡಿಗೆ ಪರಿಕರಗಳನ್ನು ವಿತರಣೆ ಮಾಡಲಾಯಿತು.
ಅಲ್ಲಿಂದ ಏನೇಕಲ್ಲು ಶಾರದಾ ಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಲಾದ ವರ್ಲಿ ಚಿತ್ರಗಳನ್ನು ಅನಾವರಣ ಮಾಡಲಾಯಿತು. ತದನಂತರ ಏನೇ ಕಲ್ಲು ಬಾನಡ್ಕದಲ್ಲಿ ಡಾ.ರವಿ ಕಕ್ಕೆ ಪದವು ಅವರು ದಾನ ರೂಪದಲ್ಲಿ ಕೊಡ ಮಾಡಿದ ತನ್ನ ಸ್ವಂತ ಜಾಗದಲ್ಲಿ ಫಲಾನುಭವಿಗೆ ಕಟ್ಟಿಕೊಟ್ಟ ಮನೆಯನ್ನ ಹಸ್ತಾಂತರಿಸಲಾಯಿತು. ನಂತರ ಏನೇ ಕಲ್ಲು ಬಸ್ ನಿಲ್ದಾಣದ ಪಕ್ಕ ರೋಟರಿ ಕ್ಲಬ್ ಅಧ್ಯಕ್ಷ ರೋ. ಪ್ರಶಾಂತ ಕೋಡಿಬೈಲ್ ತನ್ನ ಸ್ವಂತ ಖರ್ಚಿಯಲ್ಲಿ ದಾನವಾಗಿ ಕೊಡ ಮಾಡಿದ ಆಟೋರಿಕ್ಷಾ ನಿಲ್ದಾಣ ವನ್ನು ಲೋಕಾರ್ಪಣೆಗೊಳಿಸಲಾಯಿತು.
ಸಂಜೆ ಏನೆಕಲ್ಲು ಡಿ .ಇ. ರಾಯಲ್ ಹೋಟೆಲ್ ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸಾಧನೆಗೇಯ್ದ ಸಾಧಕರುಗಳನ್ನು ಸನ್ಮಾನಿಸಲಾಯಿತು. ಹಾಗೆ ವಿವಿಧ ಕಡೆಗಳಲ್ಲಿ ಕೊಡುಗೆಯಾಗಿ ನೀಡಿದ ರೋಟರಿ ಕ್ಲಬ್ಬಿನ ದಾನಿಗಳನ್ನು ಗೌರವಿಸಲಾಯಿತು. ಈ ಎಲ್ಲಾ ಸಂದರ್ಭಗಳಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ,ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷರು ,ಪದಾಧಿಕಾರಿಗಳು, ಇನ್ನರ್ ವೇಲ್ ಕ್ಲಬ್ಬಿನ ಅಧ್ಯಕ್ಷರು, ಸದಸ್ಯರುಗಳು ,ಹಾಗೂ ರೋಟರಿ ಕ್ಲಬ್ಬಿನ ಎಲ್ಲಾ ಸದಸ್ಯರು ಹಾಜರಿದ್ದರು.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…