ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ರೋಟರಿ ಜಿಲ್ಲೆ 31 81 ಇದರ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ ಅವರು ಶನಿವಾರ ಅಧಿಕೃತ ಭೇಟಿ ನೀಡಿ ವಿವಿಧ ಕೊಡುಗೆಗಳು ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು.
ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬರಮಾಡಿಕೊಂಡರು. ಅಲ್ಲಿಂದ ಬಳ್ಳಕ್ಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ರೋ. ಮೈಲಪ್ಪ ಸಂಕೇಶ್ ಅವರು ಕೊಡ ಮಾಡಿದ 9 ಅಂಗನವಾಡಿ ಕೇಂದ್ರಗಳಿಗೆ ಅಡುಗೆ ಸ್ಟೌ ಗಳನ್ನ ಉಚಿತವಾಗಿ ವಿತರಣೆ ಮಾಡಲಾಯಿತು. ಮುಂದೆ ಬಳ್ಪ ಎಡೋಣ ಶಿಶುಮಂದಿರಕ್ಕೆ ಭೇಟಿ ನೀಡಿ ಅಲ್ಲಿ ಚಿಕ್ಕ ಮಕ್ಕಳಿಗೆ ಚೇರ್ ಹಾಗೂ ಅಡಿಗೆ ಪರಿಕರಗಳನ್ನು ವಿತರಣೆ ಮಾಡಲಾಯಿತು.
ಅಲ್ಲಿಂದ ಏನೇಕಲ್ಲು ಶಾರದಾ ಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಲಾದ ವರ್ಲಿ ಚಿತ್ರಗಳನ್ನು ಅನಾವರಣ ಮಾಡಲಾಯಿತು. ತದನಂತರ ಏನೇ ಕಲ್ಲು ಬಾನಡ್ಕದಲ್ಲಿ ಡಾ.ರವಿ ಕಕ್ಕೆ ಪದವು ಅವರು ದಾನ ರೂಪದಲ್ಲಿ ಕೊಡ ಮಾಡಿದ ತನ್ನ ಸ್ವಂತ ಜಾಗದಲ್ಲಿ ಫಲಾನುಭವಿಗೆ ಕಟ್ಟಿಕೊಟ್ಟ ಮನೆಯನ್ನ ಹಸ್ತಾಂತರಿಸಲಾಯಿತು. ನಂತರ ಏನೇ ಕಲ್ಲು ಬಸ್ ನಿಲ್ದಾಣದ ಪಕ್ಕ ರೋಟರಿ ಕ್ಲಬ್ ಅಧ್ಯಕ್ಷ ರೋ. ಪ್ರಶಾಂತ ಕೋಡಿಬೈಲ್ ತನ್ನ ಸ್ವಂತ ಖರ್ಚಿಯಲ್ಲಿ ದಾನವಾಗಿ ಕೊಡ ಮಾಡಿದ ಆಟೋರಿಕ್ಷಾ ನಿಲ್ದಾಣ ವನ್ನು ಲೋಕಾರ್ಪಣೆಗೊಳಿಸಲಾಯಿತು.
ಸಂಜೆ ಏನೆಕಲ್ಲು ಡಿ .ಇ. ರಾಯಲ್ ಹೋಟೆಲ್ ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸಾಧನೆಗೇಯ್ದ ಸಾಧಕರುಗಳನ್ನು ಸನ್ಮಾನಿಸಲಾಯಿತು. ಹಾಗೆ ವಿವಿಧ ಕಡೆಗಳಲ್ಲಿ ಕೊಡುಗೆಯಾಗಿ ನೀಡಿದ ರೋಟರಿ ಕ್ಲಬ್ಬಿನ ದಾನಿಗಳನ್ನು ಗೌರವಿಸಲಾಯಿತು. ಈ ಎಲ್ಲಾ ಸಂದರ್ಭಗಳಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ,ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷರು ,ಪದಾಧಿಕಾರಿಗಳು, ಇನ್ನರ್ ವೇಲ್ ಕ್ಲಬ್ಬಿನ ಅಧ್ಯಕ್ಷರು, ಸದಸ್ಯರುಗಳು ,ಹಾಗೂ ರೋಟರಿ ಕ್ಲಬ್ಬಿನ ಎಲ್ಲಾ ಸದಸ್ಯರು ಹಾಜರಿದ್ದರು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…