ಕರಾವಳಿ

ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನ ಪಾವಂಜೆ ಇದರ ವರ್ಷಾವಧಿ ಜಾತ್ರಾ ಮಹೋತ್ಸವದಂದು ಓಂ ಕ್ರಿಕೆಟರ್ಸ್ ಪಾವಂಜೆ ಇದರ 15ನೇ ವರ್ಷದ ವಾರ್ಷಿಕೋತ್ಸವ

ಹಳೆಯಂಗಡಿ : ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನ ಪಾವಂಜೆ ಇದರ ವರ್ಷಾವಧಿ ಜಾತ್ರಾ ಮಹೋತ್ಸವದಂದು ಓಂ ಕ್ರಿಕೆಟರ್ಸ್ ಪಾವಂಜೆ ಇದರ 15ನೇ ವರ್ಷದ ವಾರ್ಷಿಕೋತ್ಸವವನ್ನು ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಪಾವಂಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀ ಚಂದ್ರಶೇಖರ ನಾನಿಲ್, ಉದ್ಯಮಿ ಶ್ರೀ ಶಶೀಂದ್ರ ಸಾಲ್ಯಾನ್ ಹಳೆಯಂಗಡಿ, ಶ್ರೀ ವಿನೋದ್ ಬೆಳ್ಳಾಯರು, ಓಂ ಕ್ರಿಕೆಟರ್ಸ್ ಪಾವಂಜೆ ಅಧ್ಯಕ್ಷರಾದ ಶರತ್, ಉಪಾಧ್ಯಕ್ಷರಾದ ರೋಹಿತ್ ಸಾಲ್ಯಾನ್, ಕಾರ್ಯದರ್ಶಿ, ಕಿರಣ್ ರಾಜ್ ಹಾಗೂ ಹಿರಿಯ ಮಾರ್ಗದರ್ಶಕರಾದ ಹರೀಶ್ ಅಡ್ಯಾರ್, ಮನೋಜ್ ಮತ್ತು ಅರುಣ್ ರವರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಸೇವೆಯನ್ನು ಗೈದಿರುವ ರಕ್ಷಕ್ ಆಂಬುಲೆನ್ಸ್ ನ್ನು ಸಮಾಜಕ್ಕೆ ನೀಡಿರುವ ಪೂಜಾ ಎರೇಂಜರ್ಸ್ ಮಾಲಕರಾದ ಶ್ರೀ ಜಯಕೃಷ್ಣ ಕೋಟ್ಯಾನ್ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿರುವ ಶ್ರೀ ಬಶೀರ್ ಚೇಳಾಯರು ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿ ವೇತನ ಹಾಗೂ ಆರೋಗ್ಯ ನಿಧಿಯನ್ನು ವೇದಿಕೆಯಲ್ಲಿ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿಠ್ಠಲ್ ನಾಯಕ್ ಕಲ್ಲಡ್ಕರವರಿಂದ ಗೀತ ಸಾಹಿತ್ಯ ಸಂಭ್ರಮ ಮತ್ತು ರಂಗತರಂಗ ಕಲಾವಿದರು ಕಾಪು ಇವರಿಂದ ತುಳು ಹಾಸ್ಯಮಯ ನಾಟಕ ‘ಒರಿಯೆ’ ಪ್ರದರ್ಶನಗೊಂಡಿತು ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

 ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…

2 hours ago

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…

2 hours ago

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…

2 hours ago

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…

4 hours ago

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

 ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…

4 hours ago

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…

4 hours ago