ಜನ ಮನದ ನಾಡಿ ಮಿಡಿತ

Advertisement

ಶಿಬರೂರು ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದಿಂದ ,10 ಲಕ್ಷ ರೂಪಾಯಿ

ಸುರತ್ಕಲ್; ಶಿಬರೂರು ದೈವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪ್ರಸಾದ ರೂಪವಾಗಿ 10 ಲಕ್ಷ ಬಂದಿರುವುದು ನಮಗೆ ಸಂತಸ ತಂದಿದೆ.

ಮಂಜುನಾಥ ಸ್ವಾಮಿ, ಸ್ವಾಮಿ, ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವದಅನುಗ್ರಹದಿಂದ ಉತ್ಸವ ಸಾಂಗವಾಗಿ ನೆರವೇರುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಿಬರೂರೂರು ಬ್ರಹ್ಮಶ್ರೀ ವೇದವ್ಯಾ ಸ ತಂತ್ರಿ ಹೇಳಿದರು ಅವರು ಶಿಬರೂರು ಶ್ರೀ ಉಳ್ಳಾಯ ಮತ್ತು‌ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡಮಾಡಿದ 10 ಲಕ್ಷ ರೂಪಾಯಿ ಚೆಕ್ ಸ್ವೀಕರಿಸಿ ಮಾತನಾಡಿದರು.

ಮಾಜಿ ಸಚಿವ ಅಭಯಚಂದ್ರಜೈನ್ ಮಾತನಾಡಿ ಧರ್ಮಸ್ಥಳ ಕ್ಷೇತ್ರದಿಂದ 10 ಲಕ್ಷ ಬಂದ ನಂತರ ಶಿಬರೂರು ಕ್ಷೇತ್ರಕ್ಕೆ ಬರುವ ಎಲ್ಲ ಅನುದಾನಗಳು ಕೂಡಿ ಬರುತ್ತದೆ, ಕ್ಷೇತ್ರಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಅನುದಾನ, ಉದ್ಯಮಿಗಳ ಸಹಕಾರ ಬರಲಿ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ ಚೆಕ್ ಹಸ್ತಾಂತರಿಸಿದರು.


ಈ ಸಂದರ್ಭ ಶಿಬರೂರುಗುತ್ತು ಪ್ರಶಾಂತ್ ಶೆಟ್ಟಿ ,ಸುಧಾಕರ ಶೇಣವ ದೇಂದೊಟ್ಟುಗುತ್ತು, ಜೀತೇಂದ್ರ ಶೆಟ್ಟಿ ಕೊರ್ಯಾರುಗುತ್ತು, ಶಿವಾನಂದ ಶೆಟ್ಟಿ ಪಡುಮನೆ, ಜಗದೀಶ್ ಶೆಟ್ಟಿ ಪರ್ಲಬೈಲು ಗುತ್ತು, ಸುಧಾಕರ ಶೆಟ್ಟಿ ಬಾಂಗಾವು, ಸೂರಿಂಜೆ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ, ಭುವನಾಭಿರಾಮ ಉಡುಪ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಬಜಪೆ ತಾಲೂಕು ಯೋಜನಾಧಿಕಾರಿ ಕರುಣಾಕರ ಆಚಾರ್ಯ, ಮೇಲ್ವಿಚಾರಕ ಅರಣಾ ಸಾಲಿಯಾನ್, ಅಧ್ಯಕ್ಷ ರವೀಂದ್ರ ಭಟ್ ಕಾರ್ಯದರ್ಶಿಗಳಾದ ಆಶಾ ಶೆಟ್ಟಿ ಶಿಬರೂರು, ಸುಜಾತಾ ಶೆಟ್ಟಿ ಕೊರ್ಯಾರು, ರೋಹಿತಾಶ್ವ ಆಚಾರ್ಯ,
ಸುಮನ್ ಶೆಟ್ಟಿ, ವಿನೀತ್ ಶೆಟ್ಟಿ, ಗೀತಾ ಮಡಿವಾಳ, ಸುರೇಶ್ ಕೈಯೂರು, ದಿನೇಶ್ ಕುಲಾಲ್, ನಿತ್ಯನ್ ಶೆಟ್ಟಿ ಶಿಬರೂರು ಗುತ್ತು, ಪ್ರಭಾಕರ ಶೆಟ್ಟಿ ಪೊಸಕಟ್ಟ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!