ಸುರತ್ಕಲ್; ಶಿಬರೂರು ದೈವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪ್ರಸಾದ ರೂಪವಾಗಿ 10 ಲಕ್ಷ ಬಂದಿರುವುದು ನಮಗೆ ಸಂತಸ ತಂದಿದೆ.
ಮಂಜುನಾಥ ಸ್ವಾಮಿ, ಸ್ವಾಮಿ, ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವದಅನುಗ್ರಹದಿಂದ ಉತ್ಸವ ಸಾಂಗವಾಗಿ ನೆರವೇರುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಿಬರೂರೂರು ಬ್ರಹ್ಮಶ್ರೀ ವೇದವ್ಯಾ ಸ ತಂತ್ರಿ ಹೇಳಿದರು ಅವರು ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡಮಾಡಿದ 10 ಲಕ್ಷ ರೂಪಾಯಿ ಚೆಕ್ ಸ್ವೀಕರಿಸಿ ಮಾತನಾಡಿದರು.
ಮಾಜಿ ಸಚಿವ ಅಭಯಚಂದ್ರಜೈನ್ ಮಾತನಾಡಿ ಧರ್ಮಸ್ಥಳ ಕ್ಷೇತ್ರದಿಂದ 10 ಲಕ್ಷ ಬಂದ ನಂತರ ಶಿಬರೂರು ಕ್ಷೇತ್ರಕ್ಕೆ ಬರುವ ಎಲ್ಲ ಅನುದಾನಗಳು ಕೂಡಿ ಬರುತ್ತದೆ, ಕ್ಷೇತ್ರಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಅನುದಾನ, ಉದ್ಯಮಿಗಳ ಸಹಕಾರ ಬರಲಿ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭ ಶಿಬರೂರುಗುತ್ತು ಪ್ರಶಾಂತ್ ಶೆಟ್ಟಿ ,ಸುಧಾಕರ ಶೇಣವ ದೇಂದೊಟ್ಟುಗುತ್ತು, ಜೀತೇಂದ್ರ ಶೆಟ್ಟಿ ಕೊರ್ಯಾರುಗುತ್ತು, ಶಿವಾನಂದ ಶೆಟ್ಟಿ ಪಡುಮನೆ, ಜಗದೀಶ್ ಶೆಟ್ಟಿ ಪರ್ಲಬೈಲು ಗುತ್ತು, ಸುಧಾಕರ ಶೆಟ್ಟಿ ಬಾಂಗಾವು, ಸೂರಿಂಜೆ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ, ಭುವನಾಭಿರಾಮ ಉಡುಪ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಬಜಪೆ ತಾಲೂಕು ಯೋಜನಾಧಿಕಾರಿ ಕರುಣಾಕರ ಆಚಾರ್ಯ, ಮೇಲ್ವಿಚಾರಕ ಅರಣಾ ಸಾಲಿಯಾನ್, ಅಧ್ಯಕ್ಷ ರವೀಂದ್ರ ಭಟ್ ಕಾರ್ಯದರ್ಶಿಗಳಾದ ಆಶಾ ಶೆಟ್ಟಿ ಶಿಬರೂರು, ಸುಜಾತಾ ಶೆಟ್ಟಿ ಕೊರ್ಯಾರು, ರೋಹಿತಾಶ್ವ ಆಚಾರ್ಯ,
ಸುಮನ್ ಶೆಟ್ಟಿ, ವಿನೀತ್ ಶೆಟ್ಟಿ, ಗೀತಾ ಮಡಿವಾಳ, ಸುರೇಶ್ ಕೈಯೂರು, ದಿನೇಶ್ ಕುಲಾಲ್, ನಿತ್ಯನ್ ಶೆಟ್ಟಿ ಶಿಬರೂರು ಗುತ್ತು, ಪ್ರಭಾಕರ ಶೆಟ್ಟಿ ಪೊಸಕಟ್ಟ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…