ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು, ಭಾರಿ ಮಳೆ ಹಿನ್ನೆಲೆಯಲ್ಲಿ ನಗರ ಪ್ರದಕ್ಷಿಣೆ ಹಾಕಿದ ಜಿಲ್ಲಾಧಿಕಾರಿ

ಮಂಗಳೂರು: ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಮಂಗಳೂರು ತಾಲೂಕಿನ ಸುರತ್ಕಲ್ ಹೋಬಳಿಯ ಕುಳಾಯಿ ಗ್ರಾಮದಲ್ಲಿ ನಡೆದಿದೆ.

ಸಂತೋಷ್ (34) ಮೃತ ದುರ್ದೈವಿ. ಭಾರಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದಿದ್ದು, ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ವಿದ್ಯುತ್ ತಂತಿ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತನ ಕುಟುಂಬಸ್ಥರಿಗೆ ಇಲಾಖೆಯ ವತಿಯಿಂದ 5 ಲಕ್ಷ ರೂ. ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಭಾರಿ ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ: ಮಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು ನಗರ ಪ್ರದಕ್ಷಿಣೆ ಕೈಗೊಂಡಿದ್ದರು. ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ಗಳು ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!