ಮಂಗಳೂರು: ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಮಂಗಳೂರು ತಾಲೂಕಿನ ಸುರತ್ಕಲ್ ಹೋಬಳಿಯ ಕುಳಾಯಿ ಗ್ರಾಮದಲ್ಲಿ ನಡೆದಿದೆ.
ಸಂತೋಷ್ (34) ಮೃತ ದುರ್ದೈವಿ. ಭಾರಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದಿದ್ದು, ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ವಿದ್ಯುತ್ ತಂತಿ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತನ ಕುಟುಂಬಸ್ಥರಿಗೆ ಇಲಾಖೆಯ ವತಿಯಿಂದ 5 ಲಕ್ಷ ರೂ. ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಭಾರಿ ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ: ಮಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು ನಗರ ಪ್ರದಕ್ಷಿಣೆ ಕೈಗೊಂಡಿದ್ದರು. ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್ಗಳು ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…