ಮಂಗಳೂರು: ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಮಂಗಳೂರು ತಾಲೂಕಿನ ಸುರತ್ಕಲ್ ಹೋಬಳಿಯ ಕುಳಾಯಿ ಗ್ರಾಮದಲ್ಲಿ ನಡೆದಿದೆ.
ಸಂತೋಷ್ (34) ಮೃತ ದುರ್ದೈವಿ. ಭಾರಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದಿದ್ದು, ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ವಿದ್ಯುತ್ ತಂತಿ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತನ ಕುಟುಂಬಸ್ಥರಿಗೆ ಇಲಾಖೆಯ ವತಿಯಿಂದ 5 ಲಕ್ಷ ರೂ. ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಭಾರಿ ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ: ಮಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು ನಗರ ಪ್ರದಕ್ಷಿಣೆ ಕೈಗೊಂಡಿದ್ದರು. ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್ಗಳು ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…