ಹಳೆಯಂಗಡಿ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಮದ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು ಬೈಕ್ ಚಲಾಯಿಸುತ್ತಿದ್ದ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದರು. ಅತೀವೇಗದಿಂದ ಬೈಕ್ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಅಪಘಾತ ಸಂಭವಿಸಿತ್ತು. ನಿಧಿಗೆ ಇಬ್ಬರು ಪುಟಾಣಿ ಮಕ್ಕಳಿದ್ದು ತೋಕೂರಿನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಯತೀಶ್ ದೇವಾಡಿಗ ಪೋಷಕರಿಗೆ ಒಬ್ಬನೇ ಪುತ್ರನಾಗಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…