ಬಂಟ್ವಾಳ: ಪರವಾನಗಿಯಿಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸಹಿತ ಸಾವಿರಾರು ರೂ ಮೌಲ್ಯದ ಮಧ್ಯವನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿ ಎಂಬಲ್ಲಿ ನಡೆದಿದೆ.
ಮಂಚಿಕಟ್ಟೆ ಎಂಬಲ್ಲಿ ಸುಧಾಕರ್ ಎಂಬವರು ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯಾಗಿದ್ದು,ಇವರನ್ನು ಬಂಧಿಸಿದ ಪೋಲೀಸರು 32,34 KE act1965 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿ ಸುಧಾಕರ್ ಅವರು ಮಂಚಿಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಗದಿತ ಬೆಲೆಗಿಂತ ಹೆಚ್ಚುವರಿಯಾಗಿ ಪಡೆದುಕೊಂಡು ಮಾರಾಟ ಮಾಡುತ್ತಿರುವ ಆರೋಪ ಬಂದಿದ್ದು, ಇವರ ಬಳಿಯಿಂದ 1480 ರೂ ಮೌಲ್ಯದ ವಿವಿಧ ಕಂಪೆನಿಯ ಮಧ್ಯದ ಬಾಟಲಿಯನ್ನು ವಶಪಡಿಸಿಕೊಂಡಿದ್ದಾರೆ. 80 ರೂ ಮುಖಬೆಲೆಯ 320 ರೂ ಮೌಲ್ಯದ ಅಮೃತ್ ಪ್ರೆಸ್ಟಿಜ್ ವಿಸ್ಕಿ 180 ML ನ ಪ್ಲಾಸ್ಟಿಕ್ 4 ಬಾಟಲಿ, 40 ರೂ ಮುಖಬೆಲೆಯ 160 ರೂ ಮೌಲ್ಯದ ಅಮೃತ್ ಪ್ರೆಸ್ಟಿಜ್ ವಿಸ್ಕಿ ಎಂದು ಬರೆದಿರುವ 90 ML ನ 4 ಸ್ಯಾಚೆಟ್, 40 ರೂ ಮುಖಬೆಲೆಯ 560 ರೂ ಮೌಲ್ಯದ Original Choice Deluxe whisky ಎಂದು ಬರೆದಿರುವ 90 ML ನ 14 ಸ್ಯಾಚೆಟ್, 40 ರೂ ಮುಖಬೆಲೆಯ 440 ರೂ ಮೌಲ್ಯದ Mysore Lancer Whisky ಎಂದು ಬರೆದಿರುವ 90 ML ನ 11 ಸ್ಯಾಚೆಟ್ ಹಾಗೂ ಗಿರಾಕಿಗಳಿಗೆ ಮದ್ಯ ಮಾರಾಟ ಮಾಡಿ ಬಂದ ರೂ. 350 ಹಣವನ್ನು ಪೋಲೀಸರು ವಶಪಡಿಸಿಕೊಂಡಿದ್ಧಾರೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…