ಕರಾವಳಿ

ಪಾರ್ಕಿಂಗ್ ಮಾಡಿ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ದ್ವಿಚಕ್ರವಾಹನವೊಂದು ಕಳವು

ಬಂಟ್ವಾಳ: ಪಾರ್ಕಿಂಗ್ ಮಾಡಿ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ದ್ವಿಚಕ್ರವಾಹನವೊಂದು ಕಳವಾದ ಘಟನೆ ಬಿ.ಸಿ.ರೋಡಿನ ನಗರ ಪೋಲೀಸ್ ಠಾಣಾ ಸಮೀಪವೇ ನಡೆದಿದೆ.


ವಾಮದಪದವು ಇರ್ವತ್ತೂರು ಮಣ್ಣೂರು ನಿವಾಸಿ ಕಾರ್ತಿಕ್ ಎಂಬವರಿಗೆ ಸೇರಿದ ಸ್ಕೂಟರ್ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ತಿಕ್ ಅವರು ಮಾ. 23 ರಂದು ಶನಿವಾರ ಬೆಳಿಗ್ಗೆ ವಾಮದಪದವು ಮನೆಯಿಂದ ಬಂದು ಬಿಸಿರೋಡಿನ ಹಳೆಯ ತಾಲೂಕು ಪಂಚಾಯತ್ ಕಟ್ಟಡ ಕೆಡವಿದ ಖಾಲಿ ಜಾಗದಲ್ಲಿ ಸ್ಕೂಟರ್ ನಿಲ್ಲಿಸಿ , ಬಡಕಬೈಲು ಎಂಬಲ್ಲಿ ಕೆಲಸದ ನಿಮಿತ್ತ ಹೋಗಿದ್ದರು.


ಕೆಲಸ ಮುಗಿಸಿ ರಾತ್ರಿ ಬಂದು ನೋಡಿದಾಗ ಸ್ಕೂಟರ್ ನಿಲ್ಲಿಸಿದ ಜಾಗದಲ್ಲಿರದೆ ಕಾಣೆಯಾಗಿದ್ದು, ಕಳವಾಗಿರುವ ಸಂಶಯವನ್ನು ವ್ಯಕ್ತಪಡಿಸಿ, ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸ್ಕೂಟರ್ ನ‌ಅಂದಾಜು‌ ಮೌಲ್ಯ 55 ಸಾವಿರ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪೋಲೀಸ್ ಠಾಣೆಯ ಸನಿಹದಲ್ಲೇ ‌ಕಳವು
ಕಳೆದ ಕೆಲವು ಸಮಯಗಳಿಂದ ನಿರಂತರವಾಗಿ ವಾಹನಗಳ ಕಳವು ನಡೆಯುತ್ತಿದ್ದು, ವಾಹನ ಸವಾರರು ಪಾರ್ಕ್ ಮಾಡಿ ತೆರಳಲು ಹೆದರುತ್ತಿದ್ದಾರೆ.ಬಿಸಿರೋಡಿನ ಪ್ಲೈ ಓವರ್ ಅಡಿಭಾಗದಲ್ಲಿ ಅನೇಕ ವಾಹನಗಳು ಕಳವಾಗಿದ್ದು, ಇನ್ನೂ ಬಹುತೇಕ ವಾಹನಗಳ ಪತ್ತೆ ಕಾರ್ಯ ನಡೆಯದೆ ಕಗ್ಗಂಟಾಗಿ ಉಳಿದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಅದರಲ್ಲೂ ಪೋಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ವಾಹನಗಳ ಕಳವು ನಡೆಯುವುತ್ತಿರುವುದು ಸಾರ್ವಜನಿಕ ವಲಯದಲ್ಲಿ ಒಂದಷ್ಟು ಆತಂಕ ವ್ಯಕ್ತವಾಗಿದೆ.
ನಗರ ಪ್ರದೇಶದಲ್ಲಿ ಅಲ್ಲಲ್ಲಿ ಸಿ.ಸಿ.ಕ್ಯಾಮರಾ ಅಳವಡಿಕೆಯಾಗಿದ್ದರೂ ಕೂಡ ಕ್ಯಾಮರಾದ ಕಣ್ತಪ್ಪಿಸಿ ಕಳವು ಮಾಡುವ ಕಳ್ಳರ ಕೈಚಳಕದ ಬಗ್ಗೆ ಪೋಲೀಸ್ ಇಲಾಖೆ ಸರಿಯಾದ ಕ್ರಮಗೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

1 day ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

1 day ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

1 day ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

2 days ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

2 days ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

2 days ago