ಜನ ಮನದ ನಾಡಿ ಮಿಡಿತ

Advertisement

ಪ್ರಥಮ ಮತ ಚಲಾಯಿಸಲಿರುವ ನೂತನ ಮತದಾರರಿಗೆ ಮತದಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ

ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕಿನ ಮಹಾವೀರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ವೆಂಕಟಚಲಪತಿಯವರು ಮಾತನಾಡಿ, ಯುವ ವಿದ್ಯಾರ್ಥಿಗಳಿಗೆ ಮತದಾನ ತಮ್ಮ‌ಜೀವನದಲ್ಲಿ ಎಷ್ಟು ಮುಖ್ಯ ಹಾಗೂ ಅದು ನಮ್ಮ‌ ಹಕ್ಕು ಎಂದು ತಿಳಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಎಪ್ರಿಲ್ 26 ರಂದು ಮತಗಟ್ಟೆ ತೆರಳಿ ತಮ್ಮ ಜವಾಬ್ದಾರಿಯಂತೆ ಮತ ಚಲಾಯಿಸಿ ಎಂದರು.

ಮೂಡುಬಿದಿರೆ TLMT ಶ್ರೀಮತಿ ರಂಜಿತಾ ಶೆಟ್ಟಿ ಇವರು ಮತದಾನದ ಮಹತ್ವ, ರಾಷ್ಟ್ರದ ಭವಿಷ್ಯ ನಿರ್ಧರಿಸುವಲ್ಲಿ ಯುವ ಮತದಾರರ ಪಾತ್ರ ಮತ್ತು ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ನಿರ್ಧಾರದ ಬಲದ ಬಗೆಗೆ ಉಪಯುಕ್ತ ಮಾಹಿತಿ ನೀಡಿದರು. ಮುಲ್ಕಿ ಹೋಬಳಿ TLMT ಶ್ರೀಮತಿ ಚಿತ್ರಾಶ್ರೀ ಕೆ.ಎಸ್ ಇವರು ಮತದಾರರಿಗೆ ಚುನಾವಣಾ ಆಯೋಗ ಬಳಕೆಗೆ ತಂದಿರುವ ಉಪಯುಕ್ತ Appಗಳು ಹಾಗೂ ಕ್ಷೇತ್ರದ ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರ ಪಾತ್ರದ ಬಗೆಗೆ ಸಕಾಲಿಕ ಮಾಹಿತಿ ಒದಗಿಸಿದರು.ಬಳಿಕ ಮತದಾನ ಮಹತ್ವ ತಿಳಿಸಲು ಪ್ರತಿಜ್ಞಾ ವಿಧಿಯನ್ನು‌ಸ್ವೀಕರಿಸಲಾಯಿತು. ಹಾಗೂ ಮತದಾನಕ್ಕೆ ಜಾಗೃತಿ ಗೀತೆಯನ್ನು ವೀಕ್ಷಿಸಲಾಯಿತು.

ಈ ಸಂದರ್ಭದಲ್ಲಿ ಪದವಿ‌ ಕಾಲೇಜು ಪ್ರಾಂಶುಪಾಲರಾದ ಹರೀಶ್(ಪ್ರಭಾರ), ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರಮೇಶ್‌ಭಟ್ ಉಪಸ್ಥಿತರಿದ್ದರು.

ರಾಜ್ಯಶಾಸ್ತ್ರ ಉಪನ್ಯಾಸಕರಾದ ಪೂರ್ಣಿಮಾ ಅವರು ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾರಾದ ಪ್ರವೀಣ್ ಸ್ವಾಗತಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!